Monday, March 24, 2014




¥ÀwæPÁ ¥ÀæPÀluÉ

¥ÀæxÀªÀÄ ¨ÁjUÉ ªÀivÀzÁ£À ªÀiÁqÀĪÀ «zÁåyðUÀ¼ÉÆA¢UÉ
ªÀiÁf gÁµÀÖç¥Àw qÁ:J.¦.eÉ.C§Äݯï PÀ¯ÁAgÀ ¸ÀªÀiÁ¯ÉÆÃZÀ£É

ªÀÄAUÀ¼ÀÆgÀÄ, ªÀiÁZïð 24 (PÀ£ÁðlPÀ ªÁvÉð):…gÁµÀÖçzÀ¯Éèà «£ÀÆvÀ£À ªÀiÁzÀjAiÀiÁzÀ ªÀiÁf gÁµÀÖç¥ÀwUÀ¼ÁzÀ qÁ:J.¦.eÉ.C§Äݯï PÀ¯ÁA CªÀgÉÆA¢UÉ ¥ÀæxÀªÀÄ ¨ÁjUÉ ªÀÄvÀ ZÀ¯Á¬Ä¸À®Ä ªÀÄvÀzÁgÀgÀ ¥ÀnÖAiÀÄ°è ºÉ¸ÀgÀÄ £ÉÆAzÁ¬Ä¹gÀĪÀ zÀQët PÀ£ÀßqÀ f¯ÉèAiÀÄ 18 jAzÀ 20 ªÀµÀðzÉƼÀV£À ¥Àæwà PÁ¯ÉÃf£À M§â «zÁåyð ºÁUÀÆ M§â «zÁåyð¤UÀ¼ÉÆA¢UÉ ªÀÄvÀzÁ£ÀzÀ ¥Á«vÀæöåvÉ ºÁUÀÆ ªÀĺÀvÀézÀ PÀÄjvÀÄ ZÀað¸À®Ä ºÁUÀÆ ¸ÀªÀiÁ¯ÉÆÃa¸À®Ä CªÀPÁ±À PÀ°à¸À¯ÁUÀĪÀÅzÉAzÀÄ zÀQët PÀ£ÀßqÀ f¯Áè ZÀÄ£ÁªÀuÁ¢üPÁj ºÁUÀÆ f¯Áè¢üPÁj                      ²æà J.©.E¨Áæ»A CªÀgÀÄ w½¹zÀgÀÄ.

F PÁAiÀÄðPÀæªÀĪÀÅ f¯ÁèqÀ½vÀzÀ ¥ÀæAiÀÄvÀߢAzÁV “ ¹éÃ¥ï “ AiÉÆÃd£ÉAiÀÄr K¦æ¯ï 1 gÀAzÀÄ ¸ÀAeÉ 4.30 jAzÀ 5-30 UÀAmÉAiÀÄ ªÀgÉUÉ zÀ.PÀ.f¯Áè ¥ÀAZÁAiÀÄvï £ÉÃvÁæªÀw ¸À¨sÁAUÀtzÀ°è DAiÉÆÃf¸À¯ÁVzÀÄÝ, F PÁAiÀÄðPÀæªÀÄzÀ°è ¨sÁUÀªÀ»¸À®Ä D¸ÀQÛ EgÀĪÀ «zÁåyðUÀ¼À®èzÀ 18 jAzÀ 20 ªÀAiÉÆêÀiÁ£ÀzÀ £ÀÆvÀ£À ªÀÄvÀzÁgÀgÀÄ ªÀÄvÀzÁgÀgÀ aÃn ºÉÆA¢zÀÝ°è, CAvÀºÀªÀgÀÄ F PÁAiÀÄðPÀæªÀÄzÀ°è ¨sÁUÀªÀ»¸À®Ä vÀªÀÄä ºÉ¸ÀgÀÄ ªÀÄvÀÄÛ «ªÀgÀUÀ¼À£ÀÄß ªÉ¨ï ¸ÉÊmï: kalamsiratmangalore@gmail.com / kalamsironethicalvoting@gmail.com / kalamsironsveepatmangalore@gmail.com UÀ¼À°è zÁR°¸À§ºÀÄzÉAzÀÄ f¯Áè¢üPÁj ²æà J.©.E¨Áæ»A CªÀgÀÄ w½¹zÀgÀÄ.  «zÁåyðUÀ¼ÀÄ ªÀÄvÀzÁgÀgÀ ¥ÀnÖAiÀÄ°è ºÉ¸ÀgÀÄ £ÉÆAzÁ¬Ä¹gÀĪÀ §UÉÎ ªÀÄvÀzÁgÀgÀ aÃn ºÉÆA¢gÀ¨ÉÃPÀÄ.  DAiÀiÁ PÁ¯ÉÃf£À ¥ÁæA±ÀÄ¥Á®gÀÄ vÀªÀÄä PÁ¯ÉÃf¤AzÀ «zÁåyðUÀ½§âgÀ£ÀÄß DAiÉÄÌ ªÀiÁr °TvÀªÁV f¯ÁèqÀ½vÀPÉÌ w½¸À¨ÉÃPÁVzÉ.

F PÁAiÀÄðPÀæªÀĪÀÅ ¸ÀA¥ÀÆtðªÁV AiÀÄĪÀd£ÀjUÁV EgÀĪÀÅzÀjAzÀ, EzÀgÀ°è «zÁåyðUÀ¼ÀÄ ªÀiÁzsÀåªÀÄ ¥Àæw¤¢üUÀ¼ÀÄ C¢üPÁjUÀ¼À ºÉÆgÀvÁV ¨ÉÃgÉ ¸ÁªÀðd¤PÀgÁUÀ°Ã, gÁdQÃAiÀÄ ¥ÀPÀëUÀ¼À ¥Àæw¤¢üUÀ¼ÁUÀ°Ã ¨sÁUÀªÀ»¸À®Ä CªÀPÁ±À EgÀĪÀÅ¢®è JAzÀÄ f¯Áè¢üPÁjUÀ¼ÀÄ ¸ÀàµÀÖ¥Àr¹zÀgÀÄ.

ªÀiÁf gÁµÀÖç¥ÀwUÀ¼ÉÆA¢UÉ £ÀÆvÀ£À ªÀÄvÀzÁgÀgÀÄ ZÀað¸ÀĪÀ/¸ÀªÀiÁ¯ÉÆÃa¸ÀĪÀ PÁAiÀÄðPÀæªÀĪÀÅ f¯ÉèAiÀÄ J¯Áè PÁ¯ÉÃdÄUÀ¼À°è ««zsÀ ZÁ£É¯ïUÀ¼À ªÀÄÆ®PÀ £ÉÃgÀ ¥Àæ¸ÁgÀ ªÀiÁqÀ®Ä f¯ÁèqÀ½vÀ ¥ÀæAiÀÄvÀß £ÀqɹzÉ.  EzÉà jÃw F PÁAiÀÄðPÀæªÀĪÀ£ÀÄß gÁeÁåzÀåAvÀ J¯Áè ªÀÄvÀzÁgÀjUÀÆ ªÀÄÄlÄÖªÀAvÉ £ÉÃgÀ ¥Àæ¸ÁgÀPÉÌ AiÀÄvÀßUÀ¼ÀÄ ¸ÁVªÉ JAzÀÄ f¯Áè ZÀÄ£ÁªÀuÁ¢üPÁjUÀ¼ÀÄ w½¹zÀgÀÄ.

Wednesday, October 2, 2013

ಗಾಂಧೀವಾದದಿಂದ ದೇಶದ ಅಭಿವೃದ್ಧಿ: ನಾಮದೇವ ಶೆಣೈ

ಮಂಗಳೂರು,ಅಕ್ಟೋಬರ್ 2:- ಆತ್ಮಜ್ಞಾನ ಮತ್ತು ವಿಜ್ಞಾನ ಸೇರಿದರೆ ಸರ್ವೋದಯ. ದೇಶದ ಅಭಿವೃದ್ಧಿ ಗ್ರಾಮಸ್ವರಾಜ್ಯದಲ್ಲಿದೆ. ನಮ್ಮ ಗ್ರಾಮಗಳಿನ್ನೂ ಸ್ವರಾಜ್ಯದ ಬೆಳಕನ್ನು ಕಂಡಿಲ್ಲ ಎಂದು ಹಿರಿಯ ಸ್ವಾತಂತ್ರ್ಯಹೋರಾಟಗಾರ ಹಾಗೂ 'ಬದಿಯಡ್ಕ ಗಾಂಧಿ' ಎಂದೇ ಹೆಸರಾಗಿರುವ  ನಾಮದೇವ ಶೆಣೈ ಅವರು ಹೇಳಿದರು.
ವಾರ್ತಾ ಇಲಾಖೆ ದಕ್ಷಿಣಕನ್ನಡ, ಗ್ರಾಮ ಪಂಚಾಯತ್ ಬಾಳೆಪುಣಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಂಯುಕ್ತಾಶ್ರಯದಲ್ಲಿ 'ಗಾಂಧೀಜಿ ಮತ್ತು ಗ್ರಾಮ ಸ್ವರಾಜ್ಯ' ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿಂಸೆಯ ಇಂದಿನ ದಿನಗಳಲ್ಲಿ ಗಾಂದೀವಾದ ಮತ್ತು ಅಹಿಂಸೆ ಹೆಚ್ಚು ಪ್ರಸ್ತುತವಾಗಿದ್ದು ಅಭಿವೃದ್ಧಿಗೂ ಗಾಂಧಿಯವರ ಗ್ರಾಮಸ್ವರಾಜ್ಯವೇ ಕಾರಣವಾಗಲಿದೆ. ಚೀನಾದಂತಹ ಕಮ್ಯುನಿಸ್ಟ್ ದೇಶದಲ್ಲೂ ಗಾಂಧಿ ಸ್ಥಾನ ಪಡೆದಿದ್ದು ನಮ್ಮಲ್ಲಿ ಯುವಜನರು ಗಾಂಧಿಯನ್ನು ಮರೆಯುತ್ತಿದ್ದಾರೆ. ಪಠ್ಯ ಪುಸ್ತಕಗಳಲ್ಲಿ, ಶಾಲೆಗಳಲ್ಲಿ ಗಾಂಧೀಜಿಯ ಸರ್ವೋದಯ, ಅಹಿಂಸವಾದಗಳು ಪರಿಚಯವಾಗಬೇಕಿದೆ. ಜಗಕ್ಕೆ ಶಾಂತಿ ಮಂತ್ರ ನೀಡಿದ ಗಾಂಧಿಯವರು ನಮಗಿಂದು ಅನಿವಾರ್ಯ ಎಂದರು.
ತಮ್ಮ ಸ್ವಾತಂತ್ರ್ಯ ಹೋರಾಟದ ದಿನಗಳು, 1942ರಲ್ಲಿ ಭಾರತ ಬಿಟ್ಟು ತೊಲಗಿ ಘೋಷಣೆಯ ಸಂದರ್ಭದಲ್ಲಿ ನಡೆದ ಅಹಿಂಸಾ ಹೋರಾಟದ ವೇಳೆ ಎರಡೂವರೆ ವರ್ಷ ಬಳ್ಳಾರಿಯಲ್ಲಿ ಸೆರೆಮನೆಯಲ್ಲಿ ಕಳೆದ ದಿನಗಳು, ವಿನೋಬಬಾವೆಯವರ ಒಡನಾಟದ ದಿನಗಳನ್ನು ಸ್ಮರಿಸಿಕೊಂಡ ಹಿರಿಯ ಗಾಂಧೀವಾದಿಗಳು, ಮಕ್ಕಳಿಗೆ ನಿರರ್ಗಳ ಒಂದು ಗಾಂಟೆ ಕಾಲ ಸರ್ವಧರ್ಮ ಭಜನ್ ಗೀತೆಗಳನ್ನು ಹೇಳಿಕೊಟ್ಟರು.
ಇದೇ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಇಳಂತಿಲದ ಮದ್ಯಮುಕ್ತ ಕೂಸಪ್ಪ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕುಡಿಯುವ ಚಟಕ್ಕೆ ಗುರಿಯಾದವನಿಗೆ ವಿನಾಶವಲ್ಲದೆ ಬೇರೆ ದಾರಿ ಇಲ್ಲ ಎಂದರು. ತಾವು ಕುಡಿತವನ್ನು ಆರಂಭಿಸಿದ ದಿನಗಳು, ಚಟಕ್ಕೆ ದಾಸರಾದ ದಿನಗಳು, ಬಳಿಕ ಮದ್ಯವರ್ಜನ ಶಿಬಿರದಲ್ಲಿ ಸೇರಿದ ಬಳಿಕ ಮದ್ಯಪಾನ ವರ್ಜಿಸಿ ಬದುಕು ಕಟ್ಟಿದ ದಿನಗಳನ್ನು ವೇದಿಕೆಯಲ್ಲಿ ಹಂಚಿಕೊಂಡರು.
ಅಧ್ಯಕ್ಷತೆಯನ್ನು ಬಾಳೆಪುಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಗಿರೀಶ್ ಬೆಳ್ಳೇರಿ ಮಾತನಾಡಿದರು. ಸಮಾರಂಭಕ್ಕೆ ಆಗಮಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯರಾದ  ಸಂತೋಷ್ ಕುಮಾರ್ ರೈ ಅವರು ತಮ್ಮ ಬಾಳೆಪುಣಿ ಗ್ರಾಮಪಂಚಾಯಿತಿಯ ಕೊರಗ ಕಾಲನಿಯನ್ನು ಮಾದರಿಯಾಗಿಸುವ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.
ವಾರ್ತಾಧಿಕಾರಿ ಶ್ರೀಮತಿ ರೋಹಿಣಿ, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಪ್ರೊ. ವಿನೀತ ಕೆ ಸಮಾರಂಭದಲ್ಲಿದ್ದರು. ವಾರ್ತಾಇಲಾಖೆಯ ಫ್ರಾನ್ಸಿಸ್ ಲೂಯಿಸ್ ಕಾರ್ಯಕ್ರಮ ನಿರೂಪಿಸಿದರು. ಪಂಚಾಯಿತಿ ಪಿ ಡಿ ಒ ಉಗ್ಗಪ್ಪ ಮೂಲ್ಯ, ಕಾರ್ಯದರ್ಶಿ ನಳಿನಿ ಹಾಗೂ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.
ಕೆನರಾ ಕಾಲೇಜು, ಗೋಕರ್ಣನಾಥೇಶ್ವರ ಕಾಲೇಜು, ಶ್ರೀ ನಾರಾಯಣ ಗುರು ಕಾಲೇಜು, ರಥಬೀದಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಬಾಳೆಪುಣಿ ಪಂಚಾಯಿತಿ ಕೊರಗರ ಕಾಲನಿಯ ಒಂದು ರಸ್ತೆಯನ್ನು ಶ್ರಮದಾನದ ಮುಖಾಂತರ ಸ್ವಚ್ಛಗೊಳಿಸಿದರು.

Tuesday, October 1, 2013

ಹಿರಿಯರನ್ನು ಗೌರವಿಸಿ: ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ

ಮಂಗಳೂರು,ಅಕ್ಟೋಬರ್ 01: ಹಿರಿಯರನ್ನು ವೃದ್ಧಾಶ್ರಮಗಳಿಗೆ ಸೇರಿಸದೆ ಗೌರವಿಸಿ ಕುಟುಂಬದೊಂದಿರಿಸಿ ಪೋಷಿಸಬೇಕು. ಆದರೆ ಇಂದಿನ ದಿನಗಳಲ್ಲಿ ಹಿರಿಯರನ್ನು ವೃದ್ಧಾಶ್ರಮಗಳಿಗೆ ಸೇರಿಸತ್ತಿರುವುದು ದುರ್ದೈವ  ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಜೀವಿಶಾಸ್ತ್ರ, ಪರಿಸರ ಸಚಿವ ಬಿ. ರಮಾನಾಥ ರೈ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದ ಬಜ್ಜೋಡಿಯ  ಲಿಟ್ಲ್ ಸಿಸ್ಟರ್ ಆಫ್ ದಿ ಪುವರ್ ಸಂಸ್ಥೆಯಲ್ಲಿ  ಅಂತಾರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ-2013 ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ. ಕ. ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಇಂದಿನ ಪೀಳಿಗೆ ಹಿರಿಯ ನಾಗರಿಕರ ಬಗ್ಗೆ ಚಿಂತಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಪ್ರಸಕ್ತ ಸರಕಾರವು ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಸ್ಪಂದನೆ ನೀಡುತ್ತಿದೆ. ಹಲವಾರು ಯೋಜನೆಗಳು ಜಾರಿಯಲ್ಲಿವೆ.  ಹಿರಿಯ ನಾಗರಿಕರಿಗಾಗಿ  ಗುರುತು ಚೀಟಿ, ಬಸ್ ಪ್ರಯಾಣ ರಿಯಾಯಿತಿ, ಪಿಂಚಣಿ, ಸಂಧ್ಯಾ ಸುರಕ್ಷಾ ಮೊದಲಾದ ಯೋಜನೆಗಳ ಮೂಲಕ ಸರಕಾರ ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆಯನ್ನು ಸರಳೀಕರಣಕ್ಕೆ ನೂತನ ಸರಕಾರ ಮುಂದಾಗಿದೆ ಎಂದವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷ ಟಿ. ಜಿ. ಶೆಣೈ ವಹಿಸಿದ್ದರು.
ದ.ಕ.ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಪಕೀರ ಎಂ. ಮುಖ್ಯ ಅತಿಥಿಯಾಗಿದ್ದರು. ವಿಶ್ವಾಸ್ ಟ್ರಸ್ಟ್ನ ಕಾರ್ಯದರ್ಶಿ ಒಲಿಂಡಾ ಪಿರೇರಾ, ಲಿಟ್ಲ್ ಸಿಸ್ಟರ್ ಆಫ್ ದಿ ಪುವರ್ ಸಂಸ್ಥೆಯ ಸಿ. ಜೋಸ್ಲಿನ್ ಉಪಸ್ಥಿತರಿದ್ದರು.
ಮಂಗಳೂರು ಹಿರಿಯ ನಾಗರಿಕರ ಸಂಘದ ವತಿಯಿಂದ ಉಸ್ತುವಾರಿ ಸಚಿವರಿಗೆ ಈ ವೇಳೆ ಮನವಿ ಸಲ್ಲಿಸಲಾಯಿತು. ಹಿರಿಯ ನಾಗರಿಕರಿಗೆ ಆರಾಮ ಪ್ರಯಾಣ ಅವಶ್ಯವಿದ್ದು, ಕನರ್ಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಹಾಗೂ ಸ್ಲೀಪರ್ ಬಸ್ಗಳಲ್ಲಿ ಶೇ. 25ರ ರಿಯಾಯಿತಿ ದರ ನೀಡುವಲ್ಲಿ ಕ್ರಮ ಕೈಗೊಳ್ಳಬೇಕು, ಸಂಧ್ಯಾ ಸುರಕ್ಷಾ ಯೋಜನೆಯನ್ವಯ ಕೊಡುತ್ತಿರುವ 500 ರೂ.ಗಳ ಮಾಸಿಕ ಪಿಂಚಣಿಯನ್ನು 2 ಸಾವಿರ ರೂ.ಗಳಿಗೆ ಏರಿಸಬೇಕು. ಅಲ್ಲದೇ ಪಿಂಚಣಿ ಪಡೆಯುವವರ ವಯೋಮಿತಿಯನ್ನು 65ರಿಂದ 60ಕ್ಕೆ ಇಳಿಸಬೇಕು ಎಂಬ ಹಲವು ಬೇಡಿಕೆಗಳ ಈಡೇರಿಕೆಗೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗಟ್ರೂಡ್ ವೇಗಸ್ ಸ್ವಾಗತಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಚಂದ್ರಿಕಾ ಎಸ್. ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಶರ್ಮಿಳಾ ವಿದ್ಯಾಸಾಗರ್ ಹಾಗೂ ಸಂದೀಪ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಹಿರಿಯ ನಾಗರಿಕರ ದಿನಾಚರಣೆಯ ಕುರಿತಂತೆ ಮಾತನಾಡಿದರು.

Monday, September 30, 2013

ಲೇಡಿಗೋಷನ್ ಗೆ ಆಂಬುಲೆನ್ಸ್ ದೇಣಿಗೆ

ಮಂಗಳೂರು,ಸೆಪ್ಟೆಂಬರ್.30:- ಎನ್ ಎಂ ಪಿ ಟಿ ವತಿಯಿಂದ 13 ಲಕ್ಷ ರೂ.ಗಳ ಆಂಬುಲೆನ್ಸ್ ನ್ನು ನಗರದ ಲೇಡಿಗೋಷನ್ ಆಸ್ಪತ್ರೆಗೆ ಇಂದು ಜಿಲ್ಲಾಧಿಕಾರಿಗಳಿಗೆ ಕೀ ಕೊಡುವ ಮೂಲಕ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ  ಜೆ ಆರ್ ಲೋಬೋ ಅವರು ಉಪಸ್ಥಿತರಿದ್ದರು.
ಆಂಬುಲೆನ್ಸ್ ಜೀವರಕ್ಷಕ ಔಷಧಿ ಮತ್ತು ಸಲಕರಣೆಗಳೊಂದಿಗೆ ಸುಸ್ಸಜ್ಜಿತವಾಗಿದೆ ಎಂದು ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕರಾದ ಡಾ ಶಕುಂತಳಾ ಅವರು ಹೇಳಿದರು. ಎನ್ ಎಂ ಪಿಟಿ ಅಧ್ಯಕ್ಷರಾದ ತಮಿಳ್ವಾನನ್ ಮತ್ತು ಸಹೋದ್ಯೋಗಿಗಳು ಉಪಸ್ಥಿತರಿದ್ದರು.  

Sunday, September 29, 2013

ದ.ಕ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ



Tuesday, September 24, 2013

ಕೇಂದ್ರ ತಂಡದಿಂದ ಅತಿವೃಷ್ಟಿ ಹಾನಿ ಮಾಹಿತಿ ಸಂಗ್ರಹ

ಮಂಗಳೂರು, ಸೆಪ್ಟೆಂಬರ್ 24:- ಅತಿವೃಷ್ಟಿಯಿಂದಾದ ಅನಾಹುತಗಳ ಕುರಿತು ಸ್ಥಳ ಪರಿಶೀಲನೆಗೆ ದಕ್ಷಿಣ ಜಿಲ್ಲೆಗೆ ಆಗಮಿಸಿದ ಕೇಂದ್ರ ಪರಿಹಾರ ಸಮೀಕ್ಷಾ ತಂಡ ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲ್ಗಿ ಸಭೆ ನಡೆಸಿ ಸಮಗ್ರ ಮಾಹಿತಿ ಸಂಗ್ರಹಿಸಿದರು. ಕೇಂದ್ರ ಗೃಹಸಚಿವಾಲಯದ ಜಂಟಿ ಕಾರ್ಯದರ್ಶಿ ಆರ್ ಕೆ ಶ್ರೀವಾಸ್ತವ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅವರ ಜೊತೆಗೆ ಸಂಜಯ್ ಗಾರ್ಗ್ ಸಾರಿಗೆ ಮತ್ತು ಹೆದ್ದಾರಿ ವಿಭಾಗದ ಪ್ರಾದೇಶಿಕ ಅಧಿಕಾರಿ,  ಮುರಳೀಧರನ್ ಹಿರಿಯ ಸಂಶೋಧನಾ ಅಧಿಕಾರಿ ಯೋಜನಾ ಆಯೋಗ ದೆಹಲಿ, ಡಾ ಕೆ ಮನೋಹರನ್ ನಿರ್ದೇಶಕರು ಪ್ರಭಾರ, ತಂಬಾಕು ಅಭಿವೃದ್ಧಿ ಇವರು ತಂಡದಲ್ಲಿದ್ದರು.
ಅತಿವೃಷ್ಟಿಯಲ್ಲಿ 18 ಜನರು ಒಟ್ಟಿಗೆ ಮೃತಪಟ್ಟಿದ್ದು, 16 ಜಾನುವಾರುಗಳ ಜೀವಹಾನಿಯಾಗಿದೆ. 909 ಮನೆಗಳು ಹಾನಿಗಳೊಗಾಗಿದೆ. 72 ಹೆಕ್ಟೆರ್ ವ್ಯಾಪ್ತಿಯಲ್ಲಿ ಕೃಷಿ ಹಾನಿಯಾಗಿದೆ. 547.35 ಕಿ.ಮೀ ವ್ಯಾಪ್ತಿಯಲ್ಲಿ ರಸ್ತೆಗಳು ಹಾನಿಗೊಳಗಾಗಿವೆ. ಸೇತುವೆ ಮತ್ತು ಕಿರುಸೇತುವೆ ಒಟ್ಟು 39 ಹಾನಿಯಾಗಿವೆ. ಸಣ್ಣ ನೀರಾವರಿ ಕಾಮಗಾರಿಗಳು 21 ಮಳೆಯಿಂದಾಗಿ ಹಾನಿಗೊಳಗಾಗಿದೆ ಎಂದು ಜಿಲ್ಲಾಧಿಕಾರಿ ಎನ್ ಪ್ರಕಾಶ್ ಅವರು ಮಾಹಿತಿ ನೀಡಿದರು.  ಅಪರ ಜಿಲ್ಲಾಧಿಕಾರಿ ದಯಾನಂದ ಕೆ ಎ, ಸಿಇಒ ಶ್ರೀಮತಿ ತುಳಸಿ ಮದ್ದಿನೇನಿ, ಸಹಾಯಕ ಆಯುಕ್ತರಾದ ಡಾ. ಪ್ರಶಾಂತ್ ಸಭೆಯಲ್ಲಿ ಉಪಸ್ಥಿತರಿದ್ದರು.
 

Monday, September 23, 2013

ಜಿಲ್ಲೆಯಲ್ಲಿ ಸಾಹಸ ಜಲಕ್ರೀಡೆಗೆ ಪ್ರೋತ್ಸಾಹ: ಸಚಿವ ಅಭಯಚಂದ್ರ ಜೈನ್

ಮಂಗಳೂರು, ಸೆಪ್ಟೆಂಬರ್ 23:- ತಣ್ಣೀರು ಬಾವಿಯಲ್ಲಿ ಸಾಹಸ ಜಲಕ್ರೀಡೆ ಆರಂಭಿಸುವ ಬಗ್ಗೆ ಯುವ ಜನ ಸೇವಾ ಮತ್ತು ಮೀನುಗಾರಿಕೆ ಸಚಿವರಾದ  ಅಭಯಚಂದ್ರ ಜೈನ್ ಅವರು ಇಂದು ಸ್ಥಳ ಪರಿಶೀಲನೆ ನಡೆಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಯುವಜನಸೇವೆ ಇಲಾಖಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕ್ರೀಡಾಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಸಲು ಇಲಾಖೆ ಬದ್ಧವಾಗಿದೆ ಎಂದರು.  ತಾಲೂಕು ಮಟ್ಟದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಹಾಗೂ ಕ್ರೀಡಾ ತರಬೇತಿಗೆ ಪೂರಕ ವಾತಾವರಣವಿದ್ದು, ಅಗತ್ಯ ಸೌಲಭ್ಯಗಳನ್ನು ಕ್ರೀಡಾಪಟುಗಳಿಗೆ ಒದಗಿಸಲಾಗುವುದು. ಮಂಗಳಾ ಕ್ರೀಡಾಂಗಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿರುವ ಕ್ರೀಡಾಶಾಲೆಯಲ್ಲಿ ಮಕ್ಕಳ ಕೊರತೆಯಿದ್ದು, ಈ ಬಗ್ಗೆ ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಎಲ್ಲ ತಾಲೂಕುಗಳ ಅಗತ್ಯಗಳನ್ನು ಪರಿಶೀಲಿಸಿ, ಇಲಾಖೆಯ ಕಾರ್ಯಕ್ರಮಗಳ ಸಮಗ್ರ ವಿವರ ಪಡೆದರಲ್ಲದೆ ಅನುಷ್ಠಾನಕ್ಕೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಶಾಸಕರಾದ  ಜೆ ಆರ್ ಲೋಬೋ,  ಮೊಹಿಯುದ್ದಿನ್ ಬಾವಾ, ಜಿಲ್ಲಾಧಿಕಾರಿ  ಎನ್ ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಐಪಿಎಸ್ ವಿಕಾಸ್ ಕುಮಾರ್ ವಿಕಾಸ್, ಜಂಟಿ ನಿರ್ದೇಶಕರಾದ ಎಂ ಎಸ್ ರಮೇಶ್, ಡಾ ಜಿತೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಸಾಮಾಜಿಕ ನ್ಯಾಯ ಸರ್ಕಾರದ ಸಂಕಲ್ಪ: ನಿರ್ದೇಶಕರು ಟ್ರೈಬಲ್ ವೆಲ್ಫೆರ್

ಮಂಗಳೂರು, ಸೆಪ್ಟೆಂಬರ್ 23:-ರಾಜ್ಯ ಸರ್ಕಾರ ರಾಜ್ಯದ ಪರಿಶಿಷ್ಟ ವರ್ಗದ ಜನತೆಯ ಕಲ್ಯಾಣಕ್ಕಾಗಿ 2,480 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಕಾದಿರಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಮತ್ತು ಮಲೆಕುಡಿಯರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ನಿರ್ದೇಶಕರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕರಾದ ಡಾ ಕೆ ಎನ್ ವಿಜಯಪ್ರಕಾಶ್ ಹೇಳಿದರು. ಅವರಿಂದು ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಕಚೇರಿಗೆ ಭೇಟಿ ನೀಡಿ ಸಮುದಾಯದ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.
ಜಿಲ್ಲೆಯ ಕೊರಗರ ಹಾಗೂ ಮಲೆಕುಡಿಯರ ಪರಿಸ್ಥಿತಿಯ ಅರಿವು ಈಗಾಗಲೇ ಇದ್ದು, ಇವರ ಶಿಕ್ಷಣ, ಆರೋಗ್ಯ, ವಸತಿ, ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ನಿರ್ದೇಶಕರು ಹೇಳಿದರು.
ಈಗಾಗಲೇ ಚಾಮರಾಜನಗರದ ಬಿ ಆರ ಹಿಲ್ಸ್ ನ ಸೋಲಿಗರ ಹಾಡಿ,  ಬೈಲುಕುಪ್ಪೆಯ ಡೊಂಗ್ರಗರೇಷಿಯಾ ಸಮುದಾಯದವರು, ಜೇನುಕುರುಬರನ್ನು ಹಾಗೂ ಕೆಲವು ಆಶ್ರಮ ವಸತಿ ಶಾಲೆಗಳನ್ನು ಭೇಟಿ ನೀಡಿದ್ದು, ಇವರಿಗಾಗಿ ಸರ್ಕಾರ ನೀಡಿರುವ ಎಲ್ಲ ಯೋಜನೆಗಳ ಫಲವನ್ನು ಈ ಸಮುದಾಯಕ್ಕೆ ತಲುಪಿಸಲು ಕ್ರಮಕೈಗೊಳ್ಳುವುದಾಗಿ ನಿರ್ದೇಶಕರು ಹೇಳಿದರು.
ಈ ಸಂಬಂಧ ರಾಜ್ಯಮಟ್ಟದಲ್ಲಿ 25ರಂದು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗಗಳಡಿ 82,000 ಜನಸಂಖ್ಯೆಯಿದ್ದು, ಇವರಲ್ಲಿ 4,858 ಕೊರಗರು ಹಾಗೂ 7,684 ಮಲೆಕುಡಿಯರಿದ್ದಾರೆ ಎಂಬ ಅಂಕಿಅಂಶಗಳು ಲಬ್ಯವಿದೆ. ಇವರಿಗೆ ವಿವಿಧ ಯೋಜನೆಗಳಡಿ ವಸತಿ ಹಾಗೂ ನಿರ್ಮಲ ಭಾರತ ಅಭಿಯಾನದಡಿ ಶೌಚಾಲಯ ನಿಮರ್ಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ನಿರ್ದೇಶಕರು ಹೇಳಿದರು.
ಸಭೆಯಲ್ಲಿ ಐಟಿಡಿಪಿ ಅಧಿಕಾರಿ ಸಾಬಿರ್ ಅಹಮದ್ ಮುಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಉಪಸ್ಥಿತರಿದ್ದು, ಅಹವಾಲು ಹಾಗೂ ಸಲಹೆಗಳನ್ನು ನೀಡಿದರು.

ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ: ಸಚಿವ ಅಭಯಚಂದ್ರ ಜೈನ್

ಮಂಗಳೂರು, ಸೆಪ್ಟೆಂಬರ್ 23:- ಮೀನುಗಾರಿಕೆ ಇಲಾಖೆಯಿಂದ ನೀಡಿರುವ ಎಲ್ಲ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ. ಇಲಾಖೆಯ ಯೋಜನೆಗಳು ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ಬರಲಿ. ದಕ್ಷಿಣ ಕನ್ನಡ ಜಿಲ್ಲೆಯ  ಮೀನುಗಾರಿಕಾ ಬಂದರುಗಳ ಅಭಿವೃದ್ಧಿ ಕಾರ್ಯಗಳು ತಕ್ಷಣದಿಂದ ಆರಂಭವಾಗಲಿ ಎಂದು  ಯುವ ಜನ ಸೇವಾ ಮತ್ತು ಮೀನುಗಾರಿಕೆ ಸಚಿವರಾದ  ಅಭಯಚಂದ್ರ ಜೈನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಚಿವರು, ಕುಳಾಯಿ ಜೆಟ್ಟಿ ಅಭಿವೃದ್ಧಿಗೆ ಈಗಾಗಲೇ ಸಿಡಬ್ಲುಪಿಆರ್ ಎಸ್ ( ಸೆಂಟ್ರಲ್ ವಾಟರ್ ಪವರ್ ರೀಸರ್ಚ್ ಸ್ಟೇಷನ್) ಸಿಐಇಸಿಎಫ್ (ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಕೋಸ್ಟಲ್ ಎಕ್ಸಪೀರಿಯನ್ಸ್ ಫಾರ್ ಫಿಶರಿಸ್) ಈಗಾಗಲೇ ಯೋಜನೆಗೆ ಮಂಜೂರಾತಿ ಪಡೆದಿದ್ದು, ಶೀಘ್ರವೇ ಹಳೆ ಯೋಜನೆಯಂತೆ ಕಾಮಗಾರಿ ಆರಂಭಿಸಲು ಸೂಚನೆ ನೀಡಿದರಲ್ಲದೆ ಒಂದು ತಿಂಗಳೊಳಗೆ ವರದಿ ನೀಡಬೇಕೆಂದು ಸಚಿವರು ಆದೇಶಿಸಿದರು.
ಮೀನುಗಾರಿಕಾ ಬಂದರುಗಳ ಮೂರನೇ ಹಂತದ ಕಾಮಗಾರಿ ಕೈಗೊಳ್ಳುವ ಬಗ್ಗೆ ರೂ. 57.60 ಕೋಟಿ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಈಗಾಗಲೇ ಸುಮಾರು 2,000 ದಷ್ಟು ಮೀನುಗಾರಿಕಾ ದೋಣಿಗಳು ತಂಗುತ್ತಿದ್ದು ಈ ದೋಣಿಗಳಿಗೆ ಬಂದರಿನಲ್ಲಿ ಸ್ಥಳಾವಕಾಶ ಕಡಿಮೆ ಇರುವುದರಿಂದ ಕೇಂದ್ರ ಪುರಸ್ಕೃತ ಯೋಜನೆಯಡಿ ಸುಮಾರು ರೂ. 60 ಕೋಟಿ ವೆಚ್ಚದಲ್ಲಿ ಮಂಗಳೂರು ಮೀನುಗಾರಿಕಾ ಬಂದರಿನ ಮೂರನೇ ಹಂತದ ಯೋಜನೆಯಡಿ ವಿಸ್ತರಣೆಯನ್ನು ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ವಿವರಿಸಿದರು.
ಅಳಿವೆಬಾಗಿಲಿನಲ್ಲಿ ಹಾಗೂ ಚ್ಯಾನಲ್ನಲ್ಲಿ ಹೂಳೆತ್ತುವ ಕೆಲಸವನ್ನು ರೂ. 4.53 ಕೋಟಿ ಮೊತ್ತದಲ್ಲಿ ಮಾಡಲಾಗಿದೆ ಎಂದು ಮೀನುಗಾರಿಕೆ ಉಪನಿದರ್ೇಶಕರಾದ ಎಂ ಡಿ ಪ್ರಸಾದ್ ಅವರು ಸಚಿವರಿಗೆ ಮಾಹಿತಿ ನೀಡಿದರು. ಹೆಜಮಾಡಿ ಕೋಡಿಯಲ್ಲಿ ಜೆಟ್ಟಿ ನಿಮರ್ಾಣಕ್ಕೂ ಚಾಲನೆ ನೀಡಲು ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕಾ ಯಾಂತ್ರೀಕೃತ ದೋಣಿಗಳು ಬಳಸುವ ಡೀಸಿಲ್ ಎಣ್ಣೆಯ ಮೇಲಿನ ರಾಜ್ಯ ಮಾರಾಟಕರವನ್ನು ಸಂಪೂರ್ಣವಾಗಿ ಮಾಫಿ ಮಾಡಲಾಗಿದೆ. ಇದರಿಂದ ಮೀನುಗಾರರು ಪ್ರತೀ ಲೀಟರ್ ಡೀಸಿಲ್ ಮೇಲೆ ರೂ. 7. 00 ರಷ್ಟು ಸಹಾಯಧನ ಪಡೆಯುತ್ತಿದ್ದಾರೆ. ಆಧುನಿಕ ಬಹುದಿನಗಳ ಮೀನುಗಾರಿಕಾ ದೋಣಿಗಳ ನಿಮರ್ಾಣದ ಸಲುವಾಗಿ ಕೇಂದ್ರ ಸಕರ್ಾರ ಘಟಕ ವೆಚ್ಚ ಮೇಲೆ ಶೇಕಡ 10ರಷ್ಟು ಅಂದರೆ ಗರಿಷ್ಠ ರೂ. 6 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 2011-12 ಸಾಲಿನಿಂದ 200 ಘಟಕಗಳು ಸಹಾಯಧನ ಪಡೆದಿದೆ. ಕೇಂದ್ರ ಪುರಸ್ಕೃತ ಯೋಜನೆಯಡಿ ಮೀನುಗಾರಿಕೆಗೆ ಉಪಯೋಗಿಸುವ ಮಂಜುಗಡ್ಡೆ ಕಾರ್ಖಾನೆಗಳ ನಿಮರ್ಾಣಕ್ಕೆ ಘಟಕ ವೆಚ್ಚ ಗರಿಷ್ಠ ರೂ. ಒಂದು ಕೋಟಿಗೆ ಮಿತಿಗೊಳಿಸಿ ಸಹಾಯಧನ ನೀಡಲಾಗುತ್ತಿದೆ. ಕಳೆದ 5 ವರ್ಷಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿಜಿಲ್ಲೆಯಲ್ಲಿ ಯೋಜನೆಯಡಿ ಈ ತನಕ 45 ಘಟಕಗಳಿಗೆ ಸಹಾಯಧನ ನೀಡಲಾಗಿದೆ. ವಸತಿ ರಹಿತ ಮೀನುಗಾರರಿಗೆ ಮನೆಗಳನ್ನು ನಿಮರ್ಿಸುವ ಯೋಜನೆಯಡಿ ಕಳೆದ 5 ವರ್ಷಗಳಲ್ಲಿ ಕೇಂದ್ರ ಪುರಸ್ಕೃತ ಮತ್ತು ಮತ್ಸ್ಯಾಶ್ರಯ ಯೋಜನೆಯಡಿ ದ.ಕ  ಮತ್ತು ಉಡುಪಿ ಜಿಲ್ಲೆಯ 2837 ಮೀನುಗಾರ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಲು ಒಟ್ಟು 137.08 ಲಕ್ಷ ಸಹಾಯಧನ ನೀಡಲಾಗಿದೆ. 12-13ನೇ ಸಾಲಿನಲ್ಲಿ ದ.ಕ ಜಿಲ್ಲೆಗೆ 220 ಮತ್ತು ಉಡುಪಿ ಜಿಲ್ಲೆಗೆ 960 ಹೀಗೆ ಒಟ್ಟು 1180 ಮನೆಗಳನ್ನು ಹಂಚಿಕೆ ಮಾಡಲಾಗಿದೆ.
ಮತ್ಸ್ಯ ಮಹಿಳಾ ಸ್ವಾವಲಂಬನಾ ಯೋಜನೆಯನ್ನು ಮೀನುಗಾರ ಮಹಿಳೆಯರಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಮೀನುಗಾರರ ಮೀನುಗಾರಿಕೆ ಮಾಡುವಾಗ ಮೃತರಾದಲ್ಲಿ ಅವರ ವಾರಸುದಾರರಿಗೆ ಸಂಕಷ್ಟ ಪರಿಹಾರ ನಿಧಿಯಡಿ ರೂ. 50.000.00 ವನ್ನು ಪರಿಹಾರ ಧನವಾಗಿ ನೀಡಲಾಗುತ್ತಿದೆ. ಮೀನುಗಾರರಲ್ಲಿ ಉಳಿತಾಯ ಮನೋಭಾವವನ್ನು ಬೆಳೆಸುವ ಸಲುವಾಗಿ ಉಳಿತಾಯ ಮತ್ತು ಪರಿಹಾರ ಯೋಜನೆ ಯನ್ನು ಹಮ್ಮಿಕೊಳ್ಳಲಾಗಿದೆ.
ಕರಾವಳಿ ಮತ್ತು ಒಳನಾಡು ಮೀನುಗಾರರ ಭದ್ರತೆಗಾಗಿ ಹಾಗೂ ಸುರಕ್ಷತೆಯ ಮೀನುಗಾರಿಕೆಗಾಗಿ ಲೈಫ್ ಜಾಕೆಟ್ ಮತ್ತು ಲೈಫ್ ಬಾಯ್ಸ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಕೇಂದ್ರದ ಮರ್ಚಂಟ್ ಶಿಪ್ಪಿಂಗ್ ಕಾಯಿದೆಯನ್ವಯ ಮೀನುಗಾರಿಕೆಯಲ್ಲಿ ನಿರತವಾಗಿರುವ ಎಲ್ಲ ಯಾಂತ್ರೀಕೃತ ದೋಣಿ, ಮೋಟರೀಕೃತ ದೋಣಿ ಮತ್ತು ಸಾಂಪ್ರಾದಾಯಿಕ ನಾಡದೋಣಿಗಳನ್ನು ಓನ್ ಲೈನ್ ಮೂಲಕ ಮೀನುಗಾರಿಕೆ ಇಲಾಖೆಯಲ್ಲಿ ನೋಂದಾವಣೆ ಮಾಡಲಾಗುತ್ತಿದೆ. ಈ ತನಕ 2120 ಯಾಂತ್ರಿಕೃತ ದೋಣಿಗಳನ್ನು, 4615 ಮೋಟರೀಕೃತ ದೋಣಿಗಳನ್ನು ಹಾಗೂ 1925 ಸಾಂಪ್ರಾದಾಯಿಕ ದೋಣಿಗಳನ್ನು ನೋಂದಾವಣೆ ಮಾಡಲಾಗಿದೆ.
ಅಲ್ಲದೆ ಸಮುದ್ರ ಮೀನುಗಾರಿಕೆಯಲ್ಲಿ ನಿರತವಾಗಿರುವ ಎಲ್ಲ ಮೀನುಗಾರರಿಗೆ ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಗುರುತುಕಾರ್ಡು ನೀಡುವ ಕಾರ್ಯಕ್ರಮವನ್ನು ಮೀನುಗಾರಿಕೆ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದು ಈವರೆಗೆ 26,739 ಮೀನುಗಾರರಿಗೆ ಗುರುತು ಚೀಟಿ ನೀಡಲಾಗಿದೆ.
ಕುಂದಾಪುರ ಹೆಜಮಾಡಿ ಬಂದರಿನ ಅಬಿವೃದ್ದಿ ಸಂಬಂಧ ಮಣ್ಣು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬಂದ ತಕ್ಷಣ ಕ್ರಮಕೈಗೊಳ್ಳಲಾಗುವುದು. ಕರಾವಳಿ ಕೊಂಡಿ ರಸ್ತೆಗಳ ನಿರ್ವಹಣೆಗೆ 390 ಲಕ್ಷ ರೂ. ಮೀಸಲಿರಿಸಿದೆ. ಸಭೆಯಲ್ಲಿ ಶಾಸಕರಾದ  ಜೆ ಆರ್ ಲೋಬೋ,  ಮೊಹಿಯುದ್ದಿನ್ ಬಾವಾ, ಜಿಲ್ಲಾಧಿಕಾರಿ ಎನ್ ಪ್ರಕಾಶ್, ಅಪರ ಜಿಲ್ಲಾಧಿಕಾರಿ ದಯಾನಂದ ಕೆ. ಎ., ಕೆ ಎಫ್ ಡಿ ಸಿಯ ವೀರಪ್ಪಗೌಡ, ಸಹಾಯಕ ನಿರ್ದೇಶಕರಾದ ಪಾಶ್ರ್ವನಾಥ್ ಮುಂತಾದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Saturday, September 21, 2013

ಎಂಡೋಪೀಡಿತರ ಸಮಗ್ರ ಅಭಿವೃದ್ಧಿಗೆ ಯೋಜನೆ: ವಿಶೇಷ ಸಭೆ

                  ಎಂಡೋಪೀಡಿತರ ಸಮಗ್ರ ಅಭಿವೃದ್ಧಿಗೆ ಯೋಜನೆ: ವಿಶೇಷ ಸಭೆ   
 ಮಂಗಳೂರು , ಸೆಪ್ಟೆಂಬರ್ 21;- ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್/ನವೆಂಬರ್ 2012 ರಲ್ಲಿ ಎಂಡೋಪೀಡಿತರ ಸಮೀಕ್ಷೆ ನಡೆಸಿ 23 ಪ್ರಾಥಮಿಕ ಆರೋಗ್ಯ ಕೇಂದ್ರಗಳ 310165 ಜನಸಂಖ್ಯೆಯಲ್ಲಿ 5223 ಶಂಕಿತ ಎಂಡೋಸಲ್ಫಾನ್ ಪೀಡಿತ ಖಾಯಿಲೆಗೆ ತುತ್ತಾಗಿರುವುದನ್ನು  ಪತ್ತೆಹಚ್ಚಲಾಗಿತ್ತು. ಇವರಲ್ಲಿ 179 ಸಂಪೂರ್ಣ ಎಂಡೋಪೀಡಿತ ಬಾಧಿತರಾಗಿ ಮಲಗಿದಲ್ಲೇ ಇರುತ್ತಾರೆ ಎಂದು ಆರೋಗ್ಯ ಇಲಾಖೆ ಕಾರ್ಯಕರ್ತೆಯರ ಸಮೀಕ್ಷೆ ಮಾಹಿತಿ ನೀಡಿತ್ತು. ಬಳಿಕ ನಡೆದ ಸಮಗ್ರ ಸಮೀಕ್ಷೆಯಲ್ಲಿ 2,479 ಮಂದಿ ಎಂಡೋಪೀಡಿತರು ಎಂದು ಕಂಡುಬಂದಿದೆ ಎಂದು ಇಲಾಖೆ ಸಭೆಗೆ ಮಾಹಿತಿ ನೀಡಿದೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಾಹಿತಿಯನ್ನು ನೀಡಲಾಯಿತು. ಬಂಟ್ವಾಳದ 3 ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 43213 ಜನಸಂಖ್ಯೆಯಲ್ಲಿ 680 ಎಂಡೋಪೀಡಿತ ಕಾಯಿಲೆಯಿಂದ ನರಳುವವರು, 26 ಜನರು ಮಲಗಿದ್ದಲ್ಲೇ ಇದ್ದಾರೆ. ಬೆಳ್ತಂಗಡಿಯಲ್ಲಿ 6 ಪಿಎಚ್ ಸಿ ವ್ಯಾಪ್ತಿಯಲ್ಲಿ 75973 ಜನಸಂಖ್ಯಾ ವ್ಯಾಪ್ತಿಯಲ್ಲಿ 2445 ಶಂಕಿತ ಎಂಡೋಪೀಡಿತರು, 53 ಜನರು ಮಲಗಿದ್ದಲ್ಲೇ ಇದ್ದಾರೆ. ಸುಳ್ಯದ 3 ಪಿಎಚ್ ಸಿ ವ್ಯಾಪ್ತಿಯಲ್ಲಿ 38807 ಜನಸಂಖ್ಯೆಯಲ್ಲಿ 726 ಶಂಕಿತರಲ್ಲಿ 39 ಜನ ಮಲಗಿದ್ದಲೇ ಇದ್ದಾರೆ. ಪುತ್ತೂರಿನ 11 ಪಿಎಚ್ ಸಿ ವ್ಯಾಪ್ತಿಯಲ್ಲಿ 152172 ಜನಸಂಖ್ಯೆಯಲ್ಲಿ 1372 ಶಂಕಿತರು, 61 ಜನರು ಮಲಗಿದ್ದಲ್ಲೇ ಇದ್ದಾರೆ.
ಪ್ರಾಥಮಿಕ ಸಮೀಕ್ಷೆಯಲ್ಲಿ ದೈಹಿಕ ಅಂಗವಿಕಲತೆ, ಮಾನಸಿಕ ಅಸ್ವಸ್ಥತೆ, ಬುದಿ ಮಾಂದ್ಯತೆ, ಅಪಸ್ಮಾರ, ಅಬರ್ುದ ಪ್ರಕರಣಗಳು,ಪಾಶ್ವವಾಯು, ಬಂಜೆತನ ಮತ್ತು ಗರ್ಭಪಾತ ಇತ್ಯಾದಿ.
ಎಂಡೋಸಲ್ಫಾನ್ ಸಂಬಂಧಿತ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ 15, ಸಂಪೂರ್ಣ ಹಾಸಿಗೆ ಡಿದವರು 130, ತೀವ್ರ ಬುದ್ದಿ ಮಾಂದ್ಯತೆ (%40 ಅಂಗವಿಕಲತೆ)-376. ಇತರ ಅಂಗವಿಕಲತೆ (%40 ಮತ್ತು ತೀವ್ರ ಸಂಬಂಧಿತ ಕ್ಯಾನ್ಸರ್ ನಿಂದ ಬಳಲುತ್ತಿರುವವರು -1056.

ಒಟ್ಟು 1934 ಕುಟುಂಬಗಳ ಸಮೀಕ್ಷೆ ನಡೆಸಲಾಗಿದೆ. 73 ಕುಟುಂಬಗಳಲ್ಲಿ ಒಬ್ಬರಿಗಿಂತ ಹೆಚ್ಚು ಪೀಡಿತರು. 161 ಕುಟುಂಬ ಮುಖ್ಯಸ್ಥ ಬಾಧಿತರು. 130 ಸಂಪೂರ್ಣ ಹಾಸಿಗೆ ಹಿಡಿದವರು. ಸಂಪೂರ್ಣ ಹಾಸಿಗೆ ಹಿಡಿದವರಿಗೆ/ತೀವ್ರ ಬುದ್ದಿಮಾಂದ್ಯತೆ ಮತ್ತು ಸಹಾಯ ಇಲ್ಲದೆ ಚಲಿಸಲಾಗದಂತವರಿಗೆ ಮತ್ತು ಸತ್ತವರ ವಾರಸುದಾರರಿಗೆ ರೂ. 5 ಲಕ್ಷ. ಇತರೆ ಅಂಗವಿಕಲತೆ ಇರುವವರಿಗೆ ರೂ. 3 ಲಕ್ಷ. ವೈದ್ಯಕೀಯ ಸೌಲಭ್ಯಗಳನ್ನು ನೀಡುವುದು.
ಇವರೆಲ್ಲ ಸಮಸ್ಯೆ ಪರಿಹಾರಕ್ಕೆ ಸಾಮಾನ್ಯ ಸಮಿತಿ (ಎಂಡೋಲ್ಫಾನ್ ಕಲ್ಯಾಣ) ರಚಿಸಲಾಗಿದೆ. ಸಮಿತಿಯ ಅಧಿಕಾರಿಗಳು ಎಂಡೋಸಲ್ಫಾನ್ ಪೀಡಿತರನ್ನು ಗುರುತಿಸುವುದು. ಗುರುತಿಸಿದವರಿಗೆ ಸ್ಮಾಟ್ರ್  ಕಾರ್ಡು ನೀಡುವ ಮುಖಾಂತರ ಉಚಿತ ವೈದ್ಯಕೀಯ ಸೇವೆಯನ್ನು ನೀಡುವುದು. ಅಂಗವಿಕಲತೆ ಹೊಂದಿರುವವರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಲು ವಾಹನದ ವ್ಯವಸ್ಥೆ ಮಾಡುವುದು. ಗ್ರಾಮ ಪಂಚಾಯತ್ ಗೆ ಸ್ಟಾಫ್ ನಸ್ರ್ ನ್ನು ನೀಡಿ ಮನೆಯಲ್ಲಿಯೇ ಹಾಸಿಗೆಯ ಮೇಲೆ ಹಾಸಿಗೆ ಹಿಡಿದ ರೋಗಿಗಳಿಗೆ ಚಿಕಿತ್ಸೆ ನೀಡಲು ಏರ್ಪಾಡು ಮಾಡುವುದು. ಮೊಬೈಲ್ ಮೆಡಿಕಲ್ ಯುನಿಟನ್ನು ನೀಡುವುದು. ಉಚಿತಜ ಆಹಾರವನ್ನು ಎಂಡೋಸಲ್ಫಾನ್ ಪೀಡಿತರಿಗೆ ಒದಗಿಸುವುದು. ಎಂಡೋಸಲ್ಫಾನ್ ಬಾಧಿತ ಪ್ರದೇಶಗಳಲ್ಲಿ ಅದರ ನಿವಾರಣೆಗೆ ಯಾವುದಾದರು ಒಂದು ವಿಶೇಷ ಆರೋಗ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
 

Tuesday, September 17, 2013

ಅಧಿಕಾರಿಗಳು ಮಾಹಿತಿಯೊಂದಿಗೆ ಸಭೆಗೆ ಹಾಜರಾಗಿ: ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊರಗಪ್ಪ ನಾಯಕ್

ಮಂಗಳೂರು, ಸೆಪ್ಟೆಂಬರ್.17:- ಬೆಳ್ತಂಗಡಿಯ ಮುಂಡಾಜೆ, ಕಡಿರುದ್ಯಾವರ ಪ್ರದೇಶ ವ್ಯಾಪ್ತಿಯಲ್ಲಿ ಸುಮಾರು 200 ಎಕರೆಯಷ್ಟು ಭತ್ತದ ಕೃಷಿಗೆ ನೀರಿನ ಅಗತ್ಯವಿದ್ದು, ಇಲ್ಲಿನ ಮುಂಡಾಜೆ ಮತ್ತು ಒಳಂಬ್ರ ಅಳದಂಗಡಿ ಕಿಂಡಿ ಅಣೆಕಟ್ಟಿನ ಚಾನೆಲ್ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕೆಂದು ಜಿಲ್ಲಾ ಪಂಚಾಯತ್ ನ ಅಧ್ಯಕ್ಷರಾದ ಕೊರಗಪ್ಪ ನಾಯಕ್ ಅವರು  ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಪಂಚಾಯತ್ನಲ್ಲಿ ಜರುಗಿದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಕಿಂಡಿ ಅಣೆಕಟ್ಟುಗಳ ವಾರ್ಷಿಕ ನಿರ್ವಹಣೆ ಕೊರತೆಯಿಂದ ಹಲಗೆಗಳು ಮತ್ತು ಚಾನೆಲ್ ಗಳು ಹಾಳಾಗಿದ್ದು, ಕೃಷಿಕರ ಹಿತವನ್ನು ಗಮನದಲ್ಲಿರಿಸಿ ಕಾಮಗಾರಿಯನ್ನು ಮುಗಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರು ಅಧಿಕಾರಿಗಳಿಗೆ ಹೇಳಿದರು.
ಸುಳ್ಯ ತಾಲೂಕಿನ ಕಲ್ಮಕಾರು ಕಿಂಡಿ ಅಣೆಕಟ್ಟು ಕಾಮಗಾರಿಗೆ 12-13ನೇ ಸಾಲಿನಲ್ಲಿ ರೂ. 10 ಲಕ್ಷ ಅನುದಾನ ಮೀಸಲಿರಿಸಿದ್ದು ಪ್ರಸ್ತುತ ಸಾಲಿನಲ್ಲಿ ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು, ಕಾಮಗಾರಿಯನ್ನು ಶೀಘ್ರವೇ ಕೈಗೆತ್ತಿಕೊಂಡು ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 2013ನೇ ಆಗಸ್ಟ್ ತಿಂಗಳಲ್ಲಿ ವಿಶೇಷ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಒಟ್ಟು 609 ಮಕ್ಕಳನ್ನು ಕಡಿಮೆ ತೂಕದ ಮಕ್ಕಳು ಎಂದು ಗುರುತಿಸಲಾಗಿತ್ತು. ಇವರಲ್ಲಿ 83 ಮಕ್ಕಳಿಗೆ ಬಾಲಸಂಜೀವಿನಿ ಯೋಜನೆಯಡಿ ನಗರದ ವೆನ್ಲಾಕ್, ಯೆನಪೋಯ, ಎ ಜೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೊಳಪಡಿಸಲಾಗಿದ್ದು, ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಗಮನಹರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ ಗಟ್ರೂಡ್ ವೇಗಸ್ ಅವರು ಅಧ್ಯಕ್ಷರ ಪ್ರಶ್ನೆಗೆ ಉತ್ತರಿಸಿದರು.
ಮುಂದಿನ ಕೆಡಿಪಿ ಸಭೆಗೆ ಮುಂಚಿತವಾಗಿ ಎಲ್ಲ ಅಂಗನವಾಡಿಗಳಲ್ಲಿ ವಿದ್ಯುದ್ದೀಕರಣ ಸಂಪೂರ್ಣಗೊಳಿಸಬೇಕೆಂದು ಅಧ್ಯಕ್ಷರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಒಟ್ಟು 2102 ಅಂಗನವಾಡಿ ಕೇಂದ್ರಗಳಿದ್ದು, 1624 ಸ್ವಂತ ಕಟ್ಟಡ ಹೊಂದಿದೆ. 1604 ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ ಎಂದು ಉಪನಿದರ್ೇಶಕರು ಸಭೆಗೆ ಮಾಹಿತಿ ನೀಡಿದರು.
ನಿಮರ್ಿತಿ ಕೇಂದ್ರದಿಂದ ಕೈಗೆತ್ತಿಕೊಳ್ಳಲಾದ ಮಳೆ ನೀರಿನ ಕೊಯ್ಲಿನ ಕಾಮಗಾರಿ ವ್ಯವಸ್ಥೆ ಕಲ್ಪಿಸಿರುವ ಶಾಲೆಗಳ ಪೈಕಿ 399 ಶಾಲೆಗಳಲ್ಲಿ ಮಾಹಿತಿ ಕಲೆ ಹಾಕಿದ್ದು, 118 ಶಾಲೆಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ಸುಸ್ಥಿತಿಯಲ್ಲಿದೆ. 281 ಶಾಲೆಗಳಲ್ಲಿ ಮಳೆ ಕೊಯ್ಲು ವ್ಯವಸ್ಥೆ ದುರಸ್ತಿಯ ಅಗತ್ಯವಿದೆ. ಈ ಎಲ್ಲ ದುರಸ್ತಿಗೆ ಅಂದಾಜು 20 ಲಕ್ಷ ರೂ. ಅನುದಾನ ಬೇಕಿದೆ ಎಂದು ಶಿಕ್ಷಣ ಅಧಿಕಾರಿಗಳು ಮಾಹಿತಿ ನೀಡಿದರು.
ಚಾಮರ್ಾಡಿಯಿಂದ ಉಜಿರೆಗೆ ಶೀಘ್ರದಲ್ಲೇ ಹೆಚ್ಚಿನ ಬಸ್ಸುಗಳನ್ನು ಪುತ್ತೂರು ವಿಭಾಗದಿಂದ ಆರಂಭಿಸುವುದಾಗಿ ಕನರ್ಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ರೀತಿ ಮಂಗಳೂರು ಸುಬ್ರಹ್ಮಣ್ಯಕ್ಕೆ ಸಂಚರಿಸುವ ಬಸ್ಸುಗಳು ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗದಿತ ಕಾಲಕ್ಕೆ ನಿಯಮಿತವಾಗಿ ಕಾಯರ್ಾಚರಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲಾಗಿದೆ ಎಂದರು. ಬಸ್ಸುಗಳನ್ನು ಸ್ವಚ್ಛ ಹಾಗೂ ಸುಂದರವಾಗಿರಿಸಲು ಕ್ರಮಕೈಗೊಂಡಿರುವುದಕ್ಕೆ ಅಧ್ಯಕ್ಷರು ಕ. ರಾ. ರಸ್ತೆ ಸಾರಿಗೆ ನಿಗಮದವರನ್ನು ಅಭಿನಂದಿಸಿದರು.
ಬಿಸಿಎಂ ಮತ್ತು ಐಟಿಡಿಪಿ ಇಲಾಖಾ ಹಾಸ್ಟೆಲ್ ಗಳಲ್ಲಿ ಇರುವ ಎಲ್ಲ ಅಡುಗೆಯವರ ನಿಯೋಜನೆ ರದ್ದುಪಡಿಸಿ ಎಂದು ಅಧ್ಯಕ್ಷರು ಸೂಚನೆ ನೀಡಿದರು.
ಜಿಲ್ಲೆಯ 203 ಪಂಚಾಯಿತಿಯಲ್ಲಿ ಕನಿಷ್ಠ ಪಂಚಾಯಿತಿ ಕಾರ್ಯದರ್ಶಿ ಅಥವಾ ಪಿಡಿಒ ಗಳಿರಲೇಬೇಕೆಂದ ಅಧ್ಯಕ್ಷರು, ಪ0ಚಾಯಿತಿ ಅಭಿವೃದ್ಧಿಗೆ ಇದು ಅತ್ಯಗತ್ಯ. ಹಾಗಾಗಿ ಜಿಲ್ಲಾ ಪಂಚಾಯತ್ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ ಎಂದರು. ಆಶ್ರಯ ಯೋಜನೆಯಡಿ ಜಮೀನು ಕಾದಿರಿಸಿ ಹಕ್ಕುಪತ್ರ ನೀಡಲು ವಿಳಂಬ ಮಾಡುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಮುಂದಿನ ಕೆಡಿಪಿಗೆ ಹತ್ತು ದಿನ ಮುಂಚಿತವಾಗಿ ಈ ಬಗ್ಗೆ ಅಧಿಕಾರಿಗಳು ಸಮಗ್ರ ಮಾಹಿತಿ ನೀಡದಿದ್ದರೆ ಪ್ರಗತಿ ಪರಿಶೀಲನೆ ಸಭೆಯೇ ಕರೆಯುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದರು. ತಾಲೂಕುವಾರು ಇಒಗಳಿಂದ ಪ್ರಗತಿ ವಾಚಿಸಿದ ಅಧ್ಯಕ್ಷರು, ಅರ್ಹರಿಗೆ ಹಕ್ಕುಪತ್ರ ನೀಡಲು ಸಮಯಮಿತಿ ನಿಗದಿಪಡಿಸಿದರು.
ತೋಟಗಾರಿಕಾ ಇಲಾಖೆಯಲ್ಲಿ ಗೊಬ್ಬರ ವಿತರಣೆಯಲ್ಲಿ ಅವ್ಯವಹಾರ ಹಾಗೂ ಈ ಸಂಬಂಧದ ದೂರುಗಳ ಬಗ್ಗೆ ಸಮಗ್ರ ತನಿಖೆಗೆ ರಾಷ್ಟ್ರೀಯ ಮಾಧ್ಯಮ ಶಿಕ್ಷಣ ಅಭಿಯಾನದ ಅಧಿಕಾರಿ ಶಿವರಾಮಯ್ಯ ಅವರಿಗೆ ಹೊಣೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರು ವಹಿಸಿದರು.
ಕೆಡಿಪಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ  ರಿತೇಶ್ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಫಕೀರ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ  ಶ್ರೀಮತಿ ಆಶಾ ತಿಮ್ಮಪ್ಪ ಗೌಡ, ಕೃಷಿ ಮತ್ತು ಕೈಗಾರಿಕಾ ಶಿಕ್ಷಣ ಸ್ಥಾಯಿಸಮಿತಿಯ ಶ್ರೀಮತಿ ಜಯಶ್ರೀ, ಸಿಇಒ ತುಳಸಿಮದ್ದಿನೇನಿ, ಉಪಕಾರ್ಯದರ್ಶಿ ಎನ್ ಆರ್ ಉಮೇಶ್ ಉಪಸ್ಥಿತರಿದ್ದರು. 

Friday, September 13, 2013

ಎಪಿಎಲ್ ಕುಟುಂಬಕ್ಕೂ ಆರೋಗ್ಯ ಶ್ರೀ: ಖಾದರ್

ಮಂಗಳೂರು,ಸೆಪ್ಟೆಂಬರ್.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 12 ಆಸ್ಪತ್ರೆಗಳನ್ನು ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ಆರೋಗ್ಯ ಸೌಲಭ್ಯಗಳನ್ನು ನೀಡಲು ಆರಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಸುವರ್ಣ ಸುರಕ್ಷಾ ಆರೋಗ್ಯ ಟ್ರಸ್ಟ್ ಮೂಲಕ ಉಚಿತ ಆರೋಗ್ಯ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
 ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಯೋಜನೆಯ ಮೂಲಕ ಎಪಿಎಲ್ ಕುಟುಂಬದ ಸದಸ್ಯರು, ಶಿಕ್ಷಕರು, ಮಧ್ಯಮ ವರ್ಗ ಹಾಗೂ ಸರಕಾರಿ ನೌಕರ ವೃಂದಕ್ಕೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಯೋಜನೆ ರೂಪಿಸಲಾಗಿದೆ ಎಂದರು. ಮೈಸೂರು, ರಾಯಚೂರು ಮತ್ತು ಮಂಗಳೂರಿನಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುವುದು. ವಾಜಪೇಯಿ ಆರೋಗ್ಯ ಶ್ರೀ ಯೋಜನೆಯ ಮುಂದುವರಿದ ಭಾಗವಾಗಿ ಈ ಯೋಜನೆ ಜಾರಿಯಾಗುತ್ತಿದೆ ಎಂದರು.
ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ಸುಟ್ಟಗಾಯ, ಅಪಘಾತ, ನವಜಾತ ಶಿಶುಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಸಂಬಂಧಿಸಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ 147 ಆಸ್ಪತ್ರೆಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ..
ಯೋಜನೆಯ ಕುರಿತು ಮಾಹಿತಿ ನೀಡಲು ಪ್ರತಿ ಆಸ್ಪತ್ರೆಯಲ್ಲಿ `ಆರೋಗ್ಯ ಮಿತ್ರ' ಕೌಂಟರ್ ಇರಲಿದ್ದು ಅವರು ಸೇವೆಯ ಕುರಿತು ಅರ್ಹ ಫಲಾನುಭವಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ನೆರವು ನೀಡಲಿರುವರು. ಚಿಕ್ಕಮಗಳೂರು, ಮಂಗಳೂರು ಮತ್ತು ಕೊಡಗಿನಲ್ಲಿ ಈಗಾಗಲೇ 70 ಆರೋಗ್ಯ ಮಿತ್ರರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ ಸಚಿವರು, ಆರೋಗ್ಯ ಸೇವೆಯಿಂದ ಯಾರೂ ವಂಚಿತವಾಗಬಾರದು. ಆದ್ದರಿಂದ ರಾಜ್ಯದ ಪ್ರತಿಯೊಬ್ಬರೂ ಯಾವುದಾದರೊಂದು ಆರೋಗ್ಯ ಕಾರ್ಡು ಹೊಂದಿರುವಂತೆ ಆದ್ಯತೆ ನೀಡಲಾಗಿದೆ ಎಂದರು.
ಎಂಡೋ ಪಾಲನಾ ಸಮಿತಿಗೆ  ರೂ.50 ಲಕ್ಷ
ಎಂಡೋ ಪೀಡಿತರ ಸಮಸ್ಯೆಯನ್ನು ಬಗೆಹರಿಸಲು ಸರಕಾರ ಬದ್ಧವಾಗಿದೆ. ಈಗಾಗಲೇ ಎರಡು ಪಾಲನಾ ಸಮಿತಿಗಳಿಗೆ ಎಂಡೋ ಪೀಡಿತರ ವಾಷರ್ಿಕ ನಿರ್ವಹಣೆಗಾಗಿ ತಲಾ ರೂ.25 ಲಕ್ಷ ಒದಗಿಸುತ್ತಿದ್ದು, ಇನ್ನು ಮುಂದೆ ತಲಾ ರೂ.50 ಲಕ್ಷ ನೀಡಲಾಗುವುದು ಎಂದು ಮಾಹಿತಿ ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ಸುವರ್ಣ ಸುರಕ್ಷಾ ಆರೋಗ್ಯ ಟ್ರಸ್ಟ್ ವಾಜಪೇಯಿ ಆರೋಗ್ಯ ಶ್ರೀ ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ ಸಿ ಬೋರೇಗೌಡ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಡಾ.ಎನ್.ರಮೇಶ್ ಉಪಸ್ಥಿತರಿದ್ದರು.
ಸೇವಾ ಮನೋಭಾವ ಬೆಳೆಸಿಕೊಳ್ಳಿ: ಆರೋಗ್ಯ ಮಿತ್ರ ತರಬೇತಿ ಉದ್ಘಾಟಿಸಿ ಆರೋಗ್ಯ ಸಚಿವರು
ಮಂಗಳೂರು: ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವುದರೊಂದಿಗೆ ಬರುವ ರೋಗಿಗಳ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸಿ ಯೋಜನೆಗಳು ತಳ ಮಟ್ಟದ ಜನತೆಗೂ ತಲುಪುವಲ್ಲಿ `ಆರೋಗ್ಯ ಮಿತ್ರರು' ನೆರವಾಗಬೇಕು. ಆರೋಗ್ಯ ಮಿತ್ರರ ಉತ್ತಮ ಸೇವೆಯಿಂದ ಇಲಾಖೆಗೂ ಉತ್ತಮ ಹೆಸರು ಬರಲು ಸಾಧ್ಯ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.
ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ಆಶ್ರಯದಲ್ಲಿ ಶುಕ್ರವಾರ ನಗರದ ಐಎಂಎ ಸಭಾಂಗಣದಲ್ಲಿ ಏರ್ಪಡಿಸಿದ್ದ ವಾಜಪೇಯಿ ಆರೋಗ್ಯ ಶ್ರೀ ಜಿಲ್ಲಾ ವ್ಯವಸ್ಥಾಪಕ ಮತ್ತು ಆರೋಗ್ಯ ಮಿತ್ರ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ತಮ್ಮ ಕರ್ತವ್ಯದ ಮಹತ್ವವನ್ನು ಅರಿತುಕೊಂಡು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಸೇವಾ ಬದ್ಧತೆಯಿಂದ ಕೆಲಸ ಮಾಡಿದ್ದಲ್ಲಿ ಇಲಾಖೆ ಕೂಡ ಹೆಚ್ಚಿನ ಸವಲತ್ತು ಒದಗಿಸಲಿದೆ. ಸೇವೆಗೆ ಸೇರ್ಪಡೆಗೊಂಡ ಬಳಿಕ ತಮಗೆ ವೇತನ ಹೆಚ್ಚಿಸಿ, ಇನ್ನಷ್ಟು ಸವಲತ್ತು ನೀಡಿ ಎಂದು ಪ್ರತಿಭಟನೆಗೆ ಮುಂದಾಗಿ ಆರೋಗ್ಯ ಸೇವೆಯ ಮಹತ್ವವನ್ನು ಮರೆಯಬಾರದು.  ಸೇವೆಗೆ ಸೇರುವ ಮುನ್ನವೇ ಈ ಬಗ್ಗೆ ಯೋಚಿಸುವುದು ಒಳಿತು ಎಂದ ಸಚಿವರು, ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ಸೇವೆ ಸಲ್ಲಿಸಲು ಸೇರ್ಪಡೆಯಾಗಿರುವ `ಆರೋಗ್ಯ ಮಿತ್ರರಿಗೆ ಸೂಚನೆ ನೀಡಿದರು.
ವಾಜಪೇಯಿ ಆರೋಗ್ಯ ಶ್ರೀ ಯೋಜನೆಯ ಕುರಿತು ಆಸ್ಪತ್ರೆಗಳ ಪ್ರತಿ ಆರೋಗ್ಯ ಮಿತ್ರ ಕೌಂಟರ್ನಲ್ಲಿ ಫಲಕಗಳನ್ನು ಅಳವಡಿಸಬೇಕು. ಪ್ರತಿಯೊಬ್ಬರಿಗೂ ಆರೋಗ್ಯ ಸೇವೆಯ ಸಮರ್ಪಕ ಮಾಹಿತಿ ಲಭ್ಯವಾಗಬೇಕು. ಆರೋಗ್ಯ ಮಿತ್ರರು ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಜನಸಾಮಾನ್ಯರೊಂದಿಗೆ ಬೆರೆತು ಕೆಲಸ ಮಾಡಬೇಕು ಎಂದು ಸಚಿವರು ತಿಳಿಸಿದರು.

ಆಶಾ ಕಾರ್ಯಕರ್ತೆಯರ ಸಮಸ್ಯೆಯನ್ನು ಆಲಿಸಿದ ಆರೋಗ್ಯ ಸಚಿವರು

ಮಂಗಳೂರು, ಸೆಪ್ಟೆಂಬರ್ 13 : ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿ ಆಶಾ ಕಾರ್ಯಕರ್ತರಿಗೆ ನೀಡುವ ಸಂಭಾವನೆಯಷ್ಟೇ ಮ್ಯಾಚಿಂಗ್ ಗ್ರ್ಯಾಂಟ್ ನ್ನು ರಾಜ್ಯ ಸರ್ಕಾರದಿಂದ ನೀಡಲು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಅವರು ಹೇಳಿದರು.
ಅವರಿಂದು ಮಂಗಳೂರು ತಾಲೂಕು ಪಂಚಾಯಿತಿಯ ಸಾಮಥ್ರ್ಯ ಸೌಧದಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಯೋಜಿಸಲಾದ ತರಬೇತಿ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಭರವಸೆ ನೀಡಿದರು.
ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಅರಿವು ತಮಗಿದ್ದು, ಇದು ಕೇಂದ್ರ ಸರ್ಕಾರದ ನೀತಿ ನಿರೂಪಣೆಯಡಿ ಬರುವುದರಿಂದ ರಾಜ್ಯ ಸರ್ಕಾರ ಪ್ರತ್ಯೇಕ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ; ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ ವ್ಯವಸ್ಥೆಯಲ್ಲಿ ಉತ್ತಮವಾಗಿದೆ. ಹಾಗಾಗಿ ದುಡಿದದ್ದಕ್ಕೆ ಸಂಭಾವನೆಯಡಿ  ಇಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಕೊಡುವ ಸಂಭಾವನೆ ಕಡಿಮೆ ಎಂಬುದನ್ನು ಸಚಿವರು ಒಪ್ಪಿಕೊಂಡರು.
ಈಗ ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ರೋಗಿಗಳನ್ನು ಗುರುತಿಸಿ ಆಸ್ಪತ್ರೆಗೆ ಕರೆತರುವ ಆಶಾ ಕಾರ್ಯಕರ್ತೆಯರಿಗೆ 200ರೂ. ಅದರಲ್ಲೂ ರೋಗಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದರೆ ಇನ್ನೂ 100 ರೂ. ಅಧಿಕ ನೀಡಲು ಅವಕಾಶವಿದೆ. ಈ ಯೋಜನೆಯ ಉದ್ದೇಶ ಎಲ್ಲರಿಗೂ ಆರೋಗ್ಯ ಎಂದು ಸಚಿವರು ವಿವರಿಸಿದರು. ಆಶಾ ಕಾರ್ಯಕರ್ತೆಯರು ಎಪಿಎಲ್ ಕಾರ್ಡುಗಳಿಂದಾಗುತ್ತಿರುವ ತೊಂದರೆಯನ್ನು ಸಚಿವರ ಗಮನಕ್ಕೆ ತಂದಾಗ, ಈಗಾಗಲೇ ಸಮಸ್ಯೆ ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಶೀಘ್ರವೇ ಹೊಸ ನೀತಿಯನ್ನು ಜಾರಿಗೆ ತರುವುದಾಗಿ ಹೇಳಿದರು.
ಸಮಸ್ಯೆಗಳನ್ನು ಲಿಖಿತವಾಗಿ ಬರೆದು ತಮಗೆ ನೀಡುವುದರಿಂದ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟವರ ಗಮನ ಸೆಳೆಯಲು ತಮಗೆ ಅನಕೂಲವಾಗಲಿದೆ. ಹಾಗಾಗಿ ಎಲ್ಲ ಸಮಸ್ಯೆಗಳನ್ನು ಬರಹ ರೂಪದಲ್ಲಿ ಕೊಡಿ ಎಂದು ಸಚಿವರು ಆಶಾ ಕಾರ್ಯಕರ್ತೆಯರಲ್ಲಿ ಹೇಳಿದರು.
ಸಚಿವರ ಜೊತೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎನ್ ಎಸ್ ಕರೀಂ ಉಪಸ್ಥಿತರಿದ್ದರು.