Wednesday, April 22, 2009

ಚುನಾವಣೆಯಂದು ಸಾರ್ವತ್ರಿಕ ರಜೆ

ಮಂಗಳೂರು, ಏ. 22: ಚುನಾವಣಾ ಆಯೋಗ ಲೋಕಸಭಾ ಚುನಾವಣೆ ದಿನದಂದು ಸಾರ್ವತ್ರಿಕ ರಜೆ ಘೋಷಿಸಿದ್ದು, ದ. ಕ. ಜಿಲ್ಲೆಯಲ್ಲಿ ಏ. 30ರಂದು ರಜೆ ಸಾರಲಾಗಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾರ್ಖಾನೆ, ಕೈಗಾರಿಕಾ ಸಂಸ್ಥೆ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಅನುಕೂಲವಾಗುವಂತೆ ರಾಜ್ಯ ಔದ್ಯಮಿಕ ಸಂಸ್ಥೆಗಳ ಕಾಯಿದೆಯಂತೆ ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ ಎಂದು ಕಾರ್ಖಾನೆ ಮತ್ತು ಬಾಯ್ಲರ್ಗಳ ಉಪನಿರ್ದೇಶಕರು ತಿಳಿಸಿದ್ದಾರೆ.