Monday, April 27, 2009

ಚುನಾವಣಾ ಕರ್ತವ್ಯಕ್ಕೆ ವಾಹನ ಸೌಲಭ್ಯ

ಮಂಗಳೂರು, ಏ. 27: ಲೋಕಸಭಾ ಚುನಾವಣೆ -2009 ರ ಚುನಾವಣಾ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳ ಪ್ರಯಾಣಕ್ಕಾಗಿ ಮಂಗಳೂರು ನೆಹರೂ ಮೈದಾನದಿಂದ ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿಗಳಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಏ. 29ರ ಬೆ. 5.30ಕ್ಕೆ ಮಂಗಳೂರಿನ ನೆಹರೂ ಮೈದಾನದಿಂದ ಬಸ್ಸುಗಳು ಹೊರಡಲಿದ್ದು, ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರಗಳಿಗೆ ಪ್ರಯಾಣಿಸಲು ಈ ಸೌಲಭ್ಯ ಬಳಸಿಕೊಳ್ಳುವಂತೆ ಮೂಡಬಿದ್ರೆ ಸಹಾಯಕ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.