Monday, May 25, 2009

ಮಧ್ಯವರ್ತಿಗಳ ಹಾವಳಿ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ

ಮಂಗಳೂರು, ಮೇ 25: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಮೂಡಾದ ಅಧ್ಯಕ್ಷರು, ಆಯುಕ್ತರು ಮತ್ತು ನಗರ ಯೋಜನಾ ಸದಸ್ಯರನ್ನು ಭೇಟಿ ಮಾಡಬಹುದು ಎಂದು ಮೂಡಾ ಅಧ್ಯಕ್ಷ ಡಾ. ಮಾಧವ ಭಂಡಾರಿ ಅವರು ಹೇಳಿದ್ದಾರೆ.
ಕೆಲಸ ಮಾಡಿಸಿಕೊಡುವುದಾಗಿ ಹೇಳಿಕೊಳ್ಳುವ ಮಧ್ಯವರ್ತಿಗಳು ಸಾರ್ವಜನಿಕರಿಂದ ಹಣವನ್ನು ದೋಚಿದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸಾರ್ವಜನಿಕರು ಇಂತಹ ಘಟನೆಗಳಿಗೆ ಅವಕಾಶ ಮಾಡಿಕೊಡದೆ ನೇರವಾಗಿ ಮೂಡಾದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.