Thursday, May 14, 2009

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇದಾಜ್ಞೆ

ಮಂಗಳೂರು, ಮೇ. 14: ಮೇ 16ರಂದು ನಡೆಯಲಿರುವ ಮತ ಎಣಿಕೆ ಸಂದರ್ಭದಲ್ಲಿ ಮತ್ತು ನಂತರದ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ 15ರ ಸಂಜೆ 6 ಗಂಟೆಯಿಂದ 18ರ ಮಧ್ಯರಾತ್ರಿಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇದಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಶ್ರೀ ವಿ.ಪೊನ್ನು ರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಆದೇಶ ಜಾರಿ ಮಾಡಲಾಗಿದ್ದು, ಸರಕಾರಿ ಹಾಗೂ ಧಾರ್ಮಿಕ ಸಭೆಗಳನ್ನು ಹೊರತು ಪಡಿಸಿ ಯಾವುದೇ ಸಭೆ, ಮೆರವಣಿಗೆಗಳಿಗೆ ಹಾಗೂ ಸಾರ್ವಜನಿಕ ಮಾರಕಾಯುಧಗಳನ್ನು ಹೊಂದದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೇ 16ರಿಂದ 18ರವರೆಗೆ ವಿಜಯೋತ್ಸವ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಶಾಂತಿ ಭಂಗಕ್ಕೆ ಎಡೆ ಮಾಡುವಂತಹ ಯಾವುದೇ ಪ್ರಕ್ರಿಯೆಯನ್ನು ನಿಷೇಧಿಸಲಾಗಿದೆ.