Thursday, June 18, 2009

ವೃಕ್ಷಾರೋಪಣ ಅಭಿಯಾನ

ಮಂಗಳೂರು ಜೂನ್ 18: ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ ಆಯೋಜಿಸಿದ್ದ ವೃಕ್ಷಾರೋಪಣ ಅಭಿಯಾನಕ್ಕೆ ಮಂಗಳೂರಿನಲ್ಲಿ ಜಿಲ್ಲಾ ಉಸ್ತುವರಿ ಹಾಗೂ ರಾಜ್ಯ ಪರಿಸರ, ಬಂದರು, ಒಳನಾಡು ಜಲ ಸಾರಿಗೆ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ವೃಕ್ಷಾರೋಪಣ ಅಭಿಯಾನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ಲಕ್ಷ ಗಿಡಗಳನ್ನು ನೆಡಲು ಕಾರ್ಯಯೋಜನೆ ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನ ಯಶಸ್ವಿಯಾಗಲು ಮಠಗಳು, ಶಿಕ್ಷಣ - ಸಂಘಸಂಸ್ಥೆಗಳು ಮುಂದೆ ಬರಬೇಕೆಂದು ಮನವಿ ಮಾಡಿದರು. ಮಂಗಳೂರು ಮಹಾ ನಗರ ಪಾಲಿಕೆ ಮೇಯರ್ ಶಂಕರ್ ಭಟ್, ಮಂಗಳೂರು ಅರಣ್ಯ ಸಂರಕ್ಷಣಾಧಿಕಾರಿ ಎಸ್. ಶಾಂತಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ. ರವಿರಾಜ್, ಮಂಗಳೂರು ಸಹಾಯಕ ಆಯುಕ್ತ ಪ್ರಭುಲಿಂಗ ಕಾವಲಿಕಟ್ಟೆ, ಕಾರ್ಪೋರೇಟರ್ ಹರಿನಾಥ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.