Monday, July 6, 2009

ಧಾರಾಕಾರ ಮಳೆ: ಶಾಲೆಗಳಿಗೆ ರಜೆ


ಮಂಗಳೂರು,ಜು. 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ 2009ರ ಸಾಲಿನ ಮುಂಗಾರು ಮಳೆ ಮತ್ತು ಪ್ರಾಕೃತಿಕ ವಿಕೋಪ ಮುಂಜಾಗ್ರತ ಕ್ರಮವಾಗಿ ಮಂಗಳೂರು ನಗರ, ತಾಲೂಕು, ಬಂಟ್ವಾಳ, ಪುತ್ತೂರು, ಮೂಡಬಿದ್ರೆಗಳಲ್ಲಿ ಜು. 6 ಮತ್ತು 7ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣಾಧಿಕಾರಿ ಶ್ರೀ ಚಾಮೇಗೌಡ ತಿಳಿಸಿದ್ದಾರೆ.
ಜು. 7ಮತ್ತು 8ರಂದು ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ರಜೆಯನ್ನು ಘೋಷಿಸಲಾಗಿದ್ದು, ಸುಳ್ಯ ತಾಲೂಕಿನ ಮಕ್ಕಳಿಗೆ ರಜೆ ಇಲ್ಲ.