Thursday, July 9, 2009

ನಾಳೆಯಿಂದ ಶಾಲೆ ಪುನರಾರಂಭ

ಮಂಗಳೂರು,ಜು.9: ಮಳೆಯ ಕಾರಣ ಜಿಲ್ಲಾಡಳಿತ ಮುಂಜಾಗರೂಕತಾ ಕ್ರಮವಾಗಿ ಸೋಮವಾರದಿಂದ ಶಾಲಾ ಮಕ್ಕಳಿಗೆ ರಜೆ ಘೋಷಿಸಿದ್ದು,ನಾಳೆಯಿಂದ ಎಂದಿನಂತೆ ಶಾಲೆಗಳು ಆರಂಭವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಿ ಅಪಾಯಕಾರಿ ಸಂದರ್ಭಗಳಲ್ಲಿ ರಜೆಯನ್ನು ಘೋಷಿಸುವ ಅಧಿಕಾರವವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದ್ದು, ಮುಂಜಾಗರೂಕತಾ ಕ್ರಮವಾಗಿ ಬಿಇಒ ಗಳು ರಜೆ ಸಾರಬಹುದು ಎಂದು ಅವರು ತಿಳಿಸಿದ್ದಾರೆ.