Friday, July 24, 2009

ಶಾಜಿ ಎನ್ ಕೌಂಟರ್: ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ

ಮಂಗಳೂರು, ಜು. 24: ಜನವರಿ 19,2006ರಲ್ಲಿ ನಡೆದ ಶಾಜಿ ಎನ್ ಕೌಂಟರ್ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್ ತನಿಖೆ ನಡೆಸಲು ಜಿಲ್ಲಾ ದಂಡಾಧಿಕಾರಿಗಳಾದ ಶ್ರೀ ಎಸ್ ಎ.ಪ್ರಭಾಕರ ಶರ್ಮಾ ಅವರು ಆದೇಶಿಸಿದ್ದಾರೆ.
19.1.2006ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಶಾಜಿ ಯಾನೆ ಡೇವಿಡ್ ಯಾನೆ ಆಸಿಫ್ ನ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಕಾರ್ಯಾಚರಣೆ ನ್ಯಾಯಸಮ್ಮತವೇ ಹಾಗೂ ಅಗತ್ಯವಿತ್ತೇ ಎಂಬ ಬಗ್ಗೆ ಹಾಗೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ಬಲದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಉಪವಿಭಾಗ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಆದೇಶ ನೀಡಲಾಗಿದ್ದು, 3 ತಿಂಗಳೊಳಗೆ ತನಿಖೆ ಪೂರ್ಣ ಗೊಳಿಸಲು ಆದೇಶದಲ್ಲಿ ನಿರ್ದೇಶಿಸಲಾಗಿದೆ.