Thursday, July 30, 2009

ಕೃಷ್ಣಾಷ್ಟಮಿ-ಗಣೇಶೋತ್ಸವಕ್ಕೆ ಬಲವಂತದ ಹಣವಸೂಲಿ ಸಲ್ಲದು: ಎಸ್ಪಿ

ಮಂಗಳೂರು, ಜುಲೈ29: ಸಾರ್ವಜನಿಕ ಹಬ್ಬಗಳಾದ ಕೃಷ್ಣಾಷ್ಟಮಿ, ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಬಲವಂತವಾಗಿ ಹಣ ವಸೂಲು ಮಾಡುವುದನ್ನು ಮತ್ತು ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಬ್ರಮಣ್ಯೇಶ್ವರ ರಾವ್ ಆದೇಶ ಹೊರಡಿಸಿದ್ದಾರೆ.
ಜನನಿಬಿಡ ಹಾಗೂ ಸಂಚಾರ ದಟ್ಟಣೆ ಇರುವ ಪ್ರದೇಶಗಳಲ್ಲಿ ಕಾರ್ಯಕ್ರಮ ಸಂಘಟಿಸುವಾಗ ಸಂಬಂಧಿತ ಕಾನೂನುಗಳನ್ನು ಅನುಸರಿಸಬೇಕಲ್ಲದೆ, ಸಾರ್ವಜನಿಕ ಸಮಾರಂಭಗಳನ್ನು ಹಮ್ಮಿಕೊಳ್ಳುವ ಸಂದರ್ಭದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕು;ಮೊಸರುಕುಡಿಕೆ ಸಂದರ್ಭದಲ್ಲಿ ಕಂಬ ಹಾಕುವ ಮೊದಲು ಸಂಬಂಧಪಟ್ಟ ಪೊಲೀಸ್ ಠಾಣಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅವರಿಗೆ ಸಂಪೂರ್ಣ ಮಾಹಿತಿ ನೀಡಬೇಕು.ಮೆರವಣಿಗೆ ಸಾಗುವ ರಸ್ತೆ ಕುರಿತು ಪೊಲೀಸರಿಗೆ ಮೊದಲೇ ಮಾಹಿತಿ ನೀಡಬೇಕು. ರಾತ್ರಿ 10ರ ನಂತರ ಯಾವುದೇ ಧ್ವನಿವರ್ಧಕಗಳನ್ನು ಬಳಸಬಾರದೆಂದೂ,ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುವಂತಹ ಯಾವುದೇ ವೇಷ ಭೂಷಣಗಳನ್ನು ಧರಿಸಬಾರದೆಂದು, ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಸಂಬಂಧಪಟ್ಟ ಸಂಘಟಕರನ್ನು ಹೊಣೆಯಾಗಿಸಲಾಗುವುದು ಎಸ್ಪಿಯವರು ಎಚ್ಚರಿಕೆ ನೀಡಿದ್ದಾರೆ.
.