
ಇಂದು ಮಂಗಳೂರಿನ ಎನ್ ಐ ಟಿ ಕೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಧ್ಯಾಹ್ನವೇ ಇವರ ಮಾದರಿಯನ್ನು ಪರೀಕ್ಷೆಗಾಗಿ ವೈದ್ಯಕೀಯ ಪ್ರಯೋಗಲಯಕ್ಕೆ ಕಳುಹಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರು ಬಂದಿಳಿಯುವುದರಿಂದ ವಿಶೇಷ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಈ ರೋಗ ತಪಾಸಣೆಗೆಂದೇ 12 ಸದಸ್ಯರಿರುವ ವೈದ್ಯಕೀಯ ವಿಶೇಷ ತಂಡವನ್ನು ರಚಿಸಲಾಗಿದೆ. ಮತ್ತು ಪ್ರತೀ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಆದ್ಯತೆ ನೀಡಿ ಸಹಕಾರ ನೀಡಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಅವರು ಹೇಳಿದ್ದಾರೆ.
ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಸ್ಪಷ್ಟ ಪಡಿಸಿರುವ ಅವರು, ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ರೋಗ ತಡೆಗೆ ಹಾಗೂ ಮುನ್ನೆಚ್ಚರಿಕೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.