Monday, August 17, 2009

ಎಚ್1ಎನ್1 ಇಂದು ನಾಲ್ಕು ಶಂಕಿತ ಪ್ರಕರಣ

ಮಂಗಳೂರು,ಆ.17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಸೋಮವಾರ 7.8.09)4 ಶಂಕಿತ ಎಚ್1ಎನ್1 ಪ್ರಕರಣಗಳು ವರದಿಯಾಗಿದ್ದು, ಸೋಂಕು ತಗುಲಿದ ವ್ಯಕ್ತಿಗಳ ತಪಾಸಣಾ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಜೇಶ್ ತಿಳಿಸಿದ್ದಾರೆ. ಇದುವರೆಗೆ ಒಟ್ಟು 7 ಪ್ರಕರಣಗಳು ಮಾತ್ರ ಎಚ್1 ಎನ್ 1 ಎಂದು ದೃಢಪಟ್ಟಿದ್ದು, ಸೋಂಕು ಪೀಡಿತರೆಲ್ಲರೂ ಶುಶ್ರೂಷೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ.