Saturday, August 22, 2009

ಗಂಗಾ ಕಲ್ಯಾಣ ಯೋಜನೆ ಯಶಸ್ವಿ - ಅಶೋಕ್ ಕಾಟ್ವೇ

ಮಂಗಳೂರು,ಆಗಸ್ಟ್ 22. ಪೈಲಟ್ ಪ್ರಾಜೆಕ್ಟ್ ಗಂಗಾ ಕಲ್ಯಾಣ ಯೋಜನೆ ರಾಜ್ಯದಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.ಈ ಯೋಜನೆ ಅಡಿ ಒಟ್ಟು 10,100 ಸಣ್ಣ ಮತ್ತು ಅತೀ ಸಣ್ಣ ರೈತರಿಗೆ 2118 ಕೊಳವೆ ಬಾವಿಗಳನ್ನು ತೋಡಲಾಗಿದ್ದು,ಇದರಿಂದ ಕೃಷಿಕರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ದಿವಂಗತ ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಅಶೋಕ್ ಕಾಟ್ವೇ ತಿಳಿಸಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ವಿವರಗಳನ್ನು ನೀಡಿದ ಅವರು 2 ವರ್ಷಗಳಲ್ಲಿ 1.67 ಲಕ್ಷ ಜನರು ನಿಗಮದಂದ ಆರ್ಥಿಕ ಸಹಾಯ ಪಡೆದಿದ್ದು,ಒಟ್ಟು 303 ಕೋಟಿ ರೂಪಾಯಿ ಸಾಲವನ್ನು ನೀಡಲಾಗಿದೆ.ಸರ್ಕಾರ ನಿಗಮಕ್ಕೆ ಈ ವರ್ಷ 144 ಕೋಟಿ ರೂಪಾಯಿ ನೀಡಿದ್ದು,ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 4 ಕೋಟಿ 32 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದರು. ನಿಗಮ ಹೆಚ್ಚು ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದ್ದು, ಅಲೆಮಾರಿ ಜನಾಂಗ,ಉಪ್ಪಾರ, ದೇವಾಂಗ,ಕ್ಷತ್ರೀಯ,ಮತ್ತು ಸವಿತಾ ಸಮಾಜದವರಿಗೆ ವಿಶೇಷ ಪ್ಯಾಕೇಜ್ ರೂಪದಲ್ಲಿ ಸಹಾಯ ಮಾಡಲು ಯೋಜನೆ ರೂಪಿಸಿದೆ ಎಂದು ವಿವರಿಸಿದರು.ಮುಖ್ಯಮಂತ್ರಿ ಬಿ.ಎಸ್.ಯಡ್ಯೂರಪ್ಪ ಅವರು ಅತೀ ಹೆಚ್ಚಿನ ಅನುದಾನವನ್ನು ನೀಡುತಿದ್ದರೂ ದಿವಂಗತ ದೇವರಾಜ್ ಅರಸರ ಹೆಸರಿನಲ್ಲಿರುವ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೆಸರನ್ನು ಬದಲಾಯಿಸುವ ಯಾವುದೇ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು. ರಾಜ್ಯ ಅಲ್ಪ ಸಂಖ್ಯಾತ ಅಭೀವೃದ್ಧಿ ನಿಗಮದ ಅಧ್ಯಕ್ಷ ಎನ್.ಬಿ. ಅಬೂಬಕ್ಕರ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.