Tuesday, August 25, 2009

ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮಂಗಳೂರು,ಆ.25:ಮೂರನೇ ಅವಧಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲು ಇಂದು ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಭಂಡಾರಿ ಹಾಗೂ ಉಪಾಧ್ಯಕ್ಷರಾಗಿ ಜಗನ್ನಾಥ್ ಸಾಲಿಯಾನ್ ಅವರು ಆಯ್ಕೆಯಾಗಿದ್ದಾರೆ.
ಪ್ರಾದೇಶಿಕ ಆಯುಕ್ತರಾದ ಜಯಂತಿ ಅವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿ, ಬಹುಮತ ಪಡೆದ ಅಭ್ಯರ್ಥಿಗಳ ಆಯ್ಕೆಯನ್ನು ಘೋಷಿಸಿದರು.25.8.09ರಿಂದ 27.1.2011ರವರೆಗೆ ಇವರ ಅಧಿಕಾರವಧಿ. ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿ ವಿ.ಪೊನ್ನುರಾಜ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಮಂಜುನಾಥ್ ನಾಯಕ್ ಅವರು ಪಾಲ್ಗೊಂಡಿದ್ದರು. ಚುನಾವಣೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಚುನಾವಣೆ ಶಾಂತಿಯುತವಾಗಿ ನಡೆಯಿತು.