Tuesday, August 25, 2009

ಹೃಷಿಕೇಷ್ ಗೆ ಪ.ಗೋ.ಪ್ರಶಸ್ತಿ

ಮಂಗಳೂರು,ಆ.25:ಕನ್ನಡ ಪ್ರಭದ ಪತ್ರಕರ್ತ ಹೃಷಿಕೇಷ್ ಧರ್ಮಸ್ಥಳ ಅವರಿಗೆ ಗ್ರಾಮೀಣ ಪತ್ರಿಕೋದ್ಯಮಕ್ಕೆ ನೀಡುವ ಪ.ಗೋ.ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ. ಕೃಷ್ಣ ಪಾಲೇಮಾರ್ ಅವರು ಪ್ರದಾನ ಮಾಡಿದರು. ನಂತರ ಅವರು ಗ್ರಾಮೀಣ ಪತ್ರಿಕೋದ್ಯಮದ ಕೊಡುಗೆ ಕುರಿತು ಮಾತನಾಡಿದರು. ಪತ್ರಕರ್ತರು ಮತ್ತು ಪತ್ರಿಕೋದ್ಯಮದ ಮಹತ್ವವನ್ನು ಹೆಚ್ಚಿಸುವಂತೆ ಕರ್ತವ್ಯ ನಿರ್ವಹಿಸಲು ಕರೆ ನೀಡಿದ ಅವರು ನಿಷ್ಪಕ್ಷಪಾತ ಮತ್ತು ನಿಷ್ಠುರ ಪತ್ರಿಕೋದ್ಯಮದಿಂದ ಸಮಾಜಕ್ಕೆ ಲಾಭ ಎಂದರು. ಹಿರಿಯ ಪತ್ರಕರ್ತ ನರಸಿಂಹ ರಾವ್ ಪ್ರಶಸ್ತಿ ಕುರಿತು ಹಾಗೂ ಪದ್ಯಾಣ ಗೋಪಾಲಕೃಷ್ಣ (ಪ.ಗೋ) ಅವರ ಬಗ್ಗೆ ಮಾತನಾಡಿದರು.