ಮಂಗಳೂರು,ಆ.11:ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಜಯ್ ಕುಮಾರ್ ಸಿಂಗ್ ಅವರು ಮಂಗಳವಾರ ಮಂಗಳೂರಿನ ಕೊಡಿಯಾಲ್ ಬೈಲ್ ನ ಕರ್ನಾಟಕ ಬ್ಯಾಂಕಿನ ಸಭಾಂಗಣದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಜನರ ಸಮಸ್ಯೆಗಳನ್ನು ಆಲಿಸಿದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಬಿ.ನಾಗರಾಜ ಶೆಟ್ಟಿ,ಜಿಲ್ಲಾಧಿಕಾರಿ ವಿ.ಪೊನ್ನುರಾಜ್,ಐಜಿಪಿ ಗೋಪಾಲ್ ಹೊಸೂರ್,ಎಸ್ ಪಿ ಡಾ. ಸುಬ್ರಮಣ್ಯೇಶ್ವರ ರಾವ್, ಅಡಿಷನಲ್ ಎಸ್ ಪಿ. ರಮೇಶ್, ಜಿಲ್ಲಾ ಪಂಚಾಯತ್ ಸಿಇಓ ಶಿವಶಂಕರ್ ,ನಗರ ಪಾಲಿಕೆ ಆಯುಕ್ತ ವಿಜಯ ಪ್ರಕಾಶ್ ಉಪಸ್ಥಿತರಿದ್ದರು. ಸುಮಾರು 1 ಗಂಟೆಗೂ ಅಧಿಕ ಸಮಯದ ವರೆಗೂ ಡಿಜಿಪಿ ಅವರೊಂದಿಗೆ ನಡೆದ ಸಂವಾದದಲ್ಲಿ ದೊಡ್ಟ ಸಂಖ್ಯೆಯಲ್ಲಿ ಶಾಲಾ ಕಾಲೇಜು,ಸಂಘ ಸ0ಸ್ಥೆಗಳ ಪ್ರತಿನಿಧಿಗಳು,ಹಿರಿಯ ನಾಗರಿಕರು ಪಾಲ್ಗೊಂಡಿದ್ದರು.