Wednesday, September 2, 2009

ಅದಿರು ಲಾರಿ ಸಂಚಾರ ನಿಷೇಧ ಮುಂದುವರಿಕೆ

ಮಂಗಳೂರು,ಸೆ.2: ರಾಷ್ಟ್ರೀಯ ಹೆದ್ದಾರಿಯಲ್ಲಿ ಅದಿರು ಲಾರಿ ನಿಷೇಧಿಸಿ ಹೊರಡಿಸಿರುವ ಆದೇಶವನ್ನು 30.9.09ರ ಮಧ್ಯರಾತ್ರಿಯವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ವಿ. ಪೊನ್ನುರಾಜ್ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣಾ ಕೆಲಸ ನಡೆಸಲಾಗುತ್ತಿದ್ದು, ಅದಿರು ಲಾರಿ ನಿಷೇಧ ಮುಂದುವರಿಸುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಕಾರ್ಯಪಾಲಕ ಅಭಿಯಂತರರ ಕೋರಿಕೆಯನ್ನು ಪರಿಶೀಲಿಸಿ ಈ ಆದೇಶವನ್ನು ಹೊರಡಿಸಲಾಗಿದೆ.