Monday, September 14, 2009

ರಸ್ತೆ ಬದಿಯಲ್ಲಿ ಕಸ ಎಸೆಯುವ ಲಾರಿಗಳ ವಿರುದ್ಧ ಕಠಿಣ ಕ್ರಮ: ಸಚಿವ ಪಾಲೆಮಾರ್

ಮಂಗಳೂರು,ಸೆ.14:ರಸ್ತೆ ಬದಿಗಳಲ್ಲಿ ಕಸ ಎಸೆಯುವ ಲಾರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದಲ್ಲದೆ,ಲಾರಿ ಮಾಲೀಕರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜೀವಿಶಾಸ್ತ್ರ,ಪರಿಸರ, ಬಂದರು, ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ಎಚ್ಚರಿಕೆ ನೀಡಿದ್ದಾರೆ.
ಪರಿಸರ ಮಾಲಿನ್ಯಕ್ಕೆ ಮೂಲಕಾರಣವಾದ ಎಲ್ಲೆಂದರಲ್ಲಿ ಕಸ ಬಿಸಾಡುವ ಲಾರಿಗಳ ಬಗ್ಗೆ ನಾಗರೀಕ ಪ್ರಜ್ಞೆ ಇರುವ ನಾಗರೀಕರು ತಮ್ಮ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬಹುದು ಅಥವಾ ತಮ್ಮ ಕಾರ್ಯಾಲಯಕ್ಕೆ (2457919)ತಿಳಿಸಬಹುದು ಎಂದು ಅವರು ತಿಳಿಸಿದ್ದಾರೆ.