Wednesday, October 21, 2009

ಹುತಾತ್ಮ ಪೊಲೀಸರಿಗೆ ಭಾವಪೂರ್ಣ ಶ್ರದ್ಧಾಂಜಲಿ

ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ಹುತಾತ್ಮ ಪೊಲೀಸರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಆರ್.ದೇಶಪಾಂಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಪೊಲೀಸ್ ವರಿಷ್ಠಾಧಿಕಾರಿಗಳು ಸ್ವಾಗತಿಸಿ ಹುತಾತ್ಮರ ದಿನಾಚರಣೆಯ ಹಿನ್ನಲೆಯನ್ನು ವಿವರಿಸಿದರು. ದೇಶದಾದ್ಯಂತ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟ 833 ಪೊಲೀಸರ ಬಲಿದಾನವನ್ನು ಸ್ಮರಿಸಲಾಯಿತಲ್ಲದೆ, ಜಿಲ್ಲೆಯ ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಲಾಯಿತು. ಸಮಾರಂಭದಲ್ಲಿ ಐಜಿಪಿ ಗೋಪಾಲ್ ಹೊಸೂರ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಬ್ರಮಣ್ಯೇಶ್ವರ ರಾವ್, ಜಿಲ್ಲಾಧಿಕಾರಿ ವಿ.ಪೊನ್ನುರಾಜ್, ಅಡಿಷನಲ್ ಎಸ್ ಪಿ ರಮೇಶ್ ವೇದಿಕೆಯಲ್ಲಿದ್ದರು.