
ಸೋಮೇಶ್ವರ ಸಮುದ್ರ ತೀರದಲ್ಲಿ ಸರ್ಕಾರಿ ಜಮೀನು ಅತಿಕ್ರಮಿಸಿ ನಿರ್ಮಿಸಲಾಗಿದ್ದ ಹರೀಶ್ ಉಚ್ಚಿಲ ,ಕಮಲ,ಮೀರ್ ಇಮ್ತಿಯಾಜ್ ಅಹಮದ್ ಅವರ ಕಟ್ಟಡಗಳನ್ನು ತೆರವುಗೊಳಿಸಿದ್ದು, ಸುತ್ತಮುತ್ತಲಿನ 4 ಕಾಂಪೌಂಡ್ ಗೋಡೆಗಳನ್ನು ಕೆಡವಲಾಗಿದೆ.ಅಜಿತ್ ಮಲ್ಲಿ,ಪ್ರಮೋದ್ ರೈ,ಜೋಸೆಫ್ ಸಲ್ಡಾನಾ ಅವರು ಕಟ್ಟಡ ತೆರವಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದು, ಈ ಮೂರು ಹೊರತುಪಡಿಸಿ ಉಳಿದೆಲ್ಲ ಅಕ್ರಮ ಕಟ್ಟಡಗಳನ್ನು ಇಂದು ತೆರವುಗೊಳಿಸಲಾಗುವುದು ಎಂದು ಸಹಾಯಕ ಆಯುಕ್ತರು ತಿಳಿಸಿದ್ದಾರೆ.

ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪೊನ್ನುರಾಜ್, ಎಸ್ಪಿ ಡಾ. ಸುಬ್ರಹ್ಮಣ್ಯೇಶ್ವರ ರಾವ್, ಉಪಸ್ಥಿತರಿದ್ದರು, ಸ್ಥಳದಲ್ಲಿ ಪೊಲೀಸ್ ಮತ್ತು ಗೃಹರಕ್ಷಕ ದಳ ಬಿಗು ಬಂದೋಬಸ್ತು ಏರ್ಪಡಿಸಿತ್ತು.