Saturday, November 21, 2009

ಸಂಯಮದಿಂದ ವರ್ತಿಸಿ,ಶಾಂತಿ ಕಾಪಾಡಿ: ಜಿಲ್ಲಾಧಿಕಾರಿ ಮನವಿ


ಮಂಗಳೂರು,ನ.21:ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಸಮಾಜ ದ್ರೋಹಿಗಳಿಂದ ಅಹಿತಕರ ಘಟನೆಗಳು ನಡೆಯುತ್ತಿದ್ದು,ಜನರು ಈ ಬಗ್ಗೆ ಪ್ರತಿಕ್ರಿಯಿಸದೆ ಪೊಲೀಸರಿಗೆ ಪ್ರತಿಕ್ರಿಯಿಸಲು,ಕ್ರಮಕೈಗೊಳ್ಳಲು ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿ ವಿ.ಪೊನ್ನುರಾಜ್ ಮನವಿ ಮಾಡಿದ್ದಾರೆ.
ಕಿಡಿಗೇಡಿಗಳು ಸಾಮಾಜಿಕ ಅಶಾಂತಿಗೆ ಯತ್ನಿಸುತ್ತಿರುವುದು ಸ್ಪಷ್ಟವಾಗಿದ್ದು, ಜನರು ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.