Wednesday, December 16, 2009

ನಿಗಮಕ್ಕೆ 100 ಕೋಟಿ ಬಿಡುಗಡೆಗೆ ಮನವಿ: ಎನ್ ಬಿ ಅಬೂಬಕರ್

ಮಂಗಳೂರು,ಡಿ.16:ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೆಚ್ಚಿನ ನೆರವು ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ 100 ಕೋಟಿರೂ. ಬಿಡುಗಡೆ ಮಾಡಲು ಮನವಿ ಮಾಡಲಾಗಿದೆ ಎಂದು ನಿಗಮದ ಅಧ್ಯಕ್ಷ ಎನ್ ಬಿ ಅಬೂಬಕರ್ ತಿಳಿಸಿದರು.
ಪತ್ರಿಕಾ ಗೋಷ್ಟಿಯನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12ಮಂದಿಗೆ ವಾಹನ ಖರೀದಿಗೆ ಸಾಲ ನೀಡಲಾಗಿದೆ.ನಿಗಮದಿಂದ ಅರ್ಹರಿಗೆ ಸಾಲಸೌಲಭ್ಯಗಳನ್ನು ನೀಡಲು ಕ್ರಮಕೈಗೊಳ್ಳಲಾಗಿದೆ ಎಂದರು. ನಿಗಮದಿಂದ ಸಾಲವಸೂಲಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲು ಕಂಪ್ಯೂಟರ್ ಮತ್ತು ದೂರವಾಣಿ ಸಂಪರ್ಕ ಕಲ್ಪಿಸಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀಕರ ಪ್ರಭು, ಹಜ್ ಕಮಿಟಿ ಸದಸ್ಯ ಸಲೀಂ ಅಂಬಾಗಿಲು, ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಅನ್ವರ್ ರೀಕೋ, ಉಮೇಶ್ ಗೌಡ ಉಪಸ್ಥಿತರಿದ್ದರು.