Monday, December 14, 2009

8 ನೇ ಪರಿಚ್ಛೇದಕ್ಕೆ ತುಳು ಭಾಷೆ: ಸಚಿವ ಮೊಯಿಲಿ ಭರವಸೆ

ಉಜಿರೆ,ಡಿಸೆಂಬರ್ 13. ಕಳೆದ ಮೂರು ದಿನಗಳಿಂದ ಇಲ್ಲಿನ ತುಳುನಾಡ ಸಿರಿದೊಂಪದಲ್ಲಿ ನಡೆದ ವಿಶ್ವ ತುಳು ಸಮ್ಮೇಳನಕ್ಕೆ ವೈಭವದ ತೆರೆ ಬಿದ್ದಿದೆ.ಸಂಜೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವಿರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ತುಳು ಭ಻ಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ 18 ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸಮಾ ರೋಪ ಸಮಾ ರಂಭದಲ್ಲಿ ಪಾಲ್ಗೊಂಡು ಮಾತ ನಾಡಿದ ಕೇಂದ್ರ ಕಾನೂನು ಸಚಿವ ಡಾ. ಎಂ.ವೀರಪ್ಪ ಮೊಯಿಲಿ ಅವರು ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರಿಸಲು ಎಲ್ಲಾ ಸಿದ್ದತೆಗಳು ನಡೆದಿದ್ದು, ಅಂತಿಮ ಹಂತದಲ್ಲಿದೆ, ಕೇಂದ್ರ ಸರ್ಕಾರ ಶೀಘ್ರದಲ್ಲೇ ಅಂತಿಮ ತೀರ್ಮಾಣ ಕೈಗೊಳ್ಳಲಿದೆ ಎಂದರು.
ಸಮ್ಮೇ ಳನ ದಲ್ಲಿ ಪಾಲ್ಗೊಂಡು ಮಾತ ನಾಡಿದ ಉತ್ತರ ಖಂಡದ ರಾಜ್ಯ ಪಾಲೆ ಮಾರ್ಗ ರೇಟ್ ಆಳ್ವ ಅವರು ಸಹ ತುಳು ಭಾಷೆಯ ಉಳಿವಿಗೆ ಸಕಲ ನೆರವನ್ನು ನೀಡುವುದಾಗಿ ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ದೇಶ ವಿದೇಶಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಲಾಯಿತು.
ಪೇಜಾ ವರ ಮಠಾ ಧೀಶ ವಿಶ್ವೇ ಶ್ವರ ತೀರ್ಥ ಸ್ವಾಮೀಜಿ, ಮಾಣಿಲ ಮೊಹನ್ ದಾಸ್ ಸ್ವಾಮೀಜಿ, ಗೃಹ ಸಚಿವರಾದ ಡಾ. ವಿ.ಎಸ್. ಆಚಾರ್ಯ,ಲೋಕಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ,ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯು.ಟಿ. ಖಾದರ್, ಮಲ್ಲಿಕಾ ಪ್ರಸಾದ್,ಕೋಟ ಶ್ರೀನಿವಾಸ ಪೂಜಾರಿ,ಗೋಪಾಲ್ ಭಂಡಾರಿ,ಆಭಯಚಂದ್ರ ಜೈನ್,ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಾಲ್ತಾಡಿ ರಾಮಕೃಷ್ಣ ಆಚಾರ್,ಬ್ಯಾರಿ ಅಕಾಡೆಮಿ ಆಧ್ಯಕ್ಷ ಅಬ್ದುಲ್ ರಹಿಮಾನ್,ಕೊಂಕಣಿ ಅಕಾಡೆಮಿ ಅಧ್ಯಕ್ಷ ನಾರಾಯಣ ಖಾರ್ವಿ, ಡಾ.ಎಂ. ಮೋಹನ್ ಆಳ್ವ ಮತ್ತಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.