Wednesday, December 16, 2009

ಕ್ರೀಡೆಯಿಂದ ಕಾರ್ಯಕ್ಷಮತೆ ಹೆಚ್ಚಳ: ಜಿಲ್ಲಾಧಿಕಾರಿ

ಮಂಗಳೂರು,ಡಿ.16:ಕಾನೂನು ಮತ್ತು ಸುವ್ಯವಸ್ಥೆ ಪಾಲನೆಯಲ್ಲಿ ಪೊಲೀಸ್ ಇಲಾಖೆ ಪ್ರಧಾನ ಪಾತ್ರ ವಹಿಸುತ್ತಿದ್ದು, ಸದಾ ಕಾರ್ಯದ ಒತ್ತಡದಲ್ಲಿರುವ ಪೊಲೀಸರಿಗೆ ಕ್ರೀಡೆ ಜೀವನೋತ್ಸಾಹ ತುಂಬಲಿದೆ ಎಂದು ಜಿಲ್ಲಾಧಿಕಾರಿ ವಿ.ಪೊನ್ನುರಾಜ್ ಹೇಳಿದರು.

ಇಂದು ಪೊಲೀಸು ಕವಾ ಯತು ಮೈದಾನದಲ್ಲಿ ದ.ಕ.ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತ ನಾಡಿದ ಅವರು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಜಿಲ್ಲಾಧಿಕಾರಿಗಳು ಪ್ರಶಂಸಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಾ. ಎ.ಸುಬ್ರ ಮಣ್ಯೇಶ್ವರ ರಾವ್, ಅಡಿಷನಲ್ ಎಸ್ ಪಿ ರಮೇಶ್ ಉಪಸ್ಥಿತರಿದ್ದರು.