Wednesday, January 6, 2010

ಜನಪರ ಬಜೆಟ್:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ


ಮಂಗಳೂರು: ಜ. 6: ಜನ ಸಾಮಾನ್ಯರಿಗೆ ಹೊರೆ ಯಾಗದ ರೀತಿಯಲ್ಲಿ ಪ್ರಸಕ್ತ ಸಾಲಿನ ಬಜೆಟನ್ನು ಮಂಡಿ ಸಲಾಗುವುದು ಎಂದು ಮುಖ್ಯ ಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಇಂದು ಮೂಡುಬಿದಿರೆಯ ಸ್ವರಾಜ್ ಮೈದಾನದ ಹೆಲಿಪ್ಯಾಡ್ ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಗಮನದಲ್ಲಿರಿಸಿ ಸಂಪನ್ಮೂಲ ಕ್ರೋಢೀಕರಿಸಿ ಬಜೆಟ್ ರೂಪಿಲಾಗುವುದು ಎಂದು ಅವರು ಹೇಳಿದರು.

ಈ ಸಂಬಂಧ ಆರ್ಥಿಕ ತಜ್ಞರೊಂದಿಗೆ ವಿವರವಾದ ಚರ್ಚೆ ನಡೆಸಿ ಒಂದು ತಿಂಗಳ ಕಾಲ ಬಜೆಟ್ ರೂಪಿಸಲು ಸಮಯವನ್ನು ಮೀಸಲಿಡುವುದಾಗಿ ಹೇಳಿದರು.