Saturday, January 23, 2010

ಕಾನೂನು ಸುವ್ಯವಸ್ಥೆಯಲ್ಲಿ ದ.ಕ.ಜಿಲ್ಲೆ ಪ್ರಥಮ


ಅತ್ಯುತ್ತಮ ಕಾನೂನು ಸುವ್ಯವಸ್ಥೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮೊದಲನೇ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನವನ್ನು ದಕ್ಷಿಣ ಕನ್ನಡ ಪೋಲಿಸ್ ಇಲಾಖೆ ಪಡೆದಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ಮಾದ್ಯಮಾ ಗೋಷ್ಟಿಯಲ್ಲಿ ತಿಳಿಸಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಪೋಲಿಸ್ ಅಧಿಕಾರಿಗಳ ಸಮಾವೇಶದಲ್ಲಿ ಈ ಪ್ರಶಸ್ತಿ ಮತ್ತು ಪ್ರಶಸ್ತಿ ಪತ್ರವನ್ನು ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಡಾ.ಅಜಯ್ ಕುಮಾರ್ ಸಿಂಗ್ ಅವರು ಪ್ರದಾನ ಮಾಡಿದರು ಎಂದ ಆವರು ಈ ಪ್ರಶಸ್ತಿ ಜಿಲ್ಲಾ ಪೋಲಿಸ್ ಸಿಬಂದಿ ಮತ್ತು ಸಹಕಾರ ನೀಡಿದ ಸಾರ್ವಜನಿಕರಿಗೆ ಸಲ್ಲುತ್ತದೆ ಎಂದರು.ಜಿಲ್ಲಾ ಎಡಿಷನಲ್ ಎಸ್ಪಿ ಆರ್. ರಮೇಶ್ ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.