Saturday, January 16, 2010

ಮಂಗಳೂರು,ಜ.16: 21 ನೇ ರಾಷ್ಟೀಯ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ರಸ್ತೆ ಸುರಕ್ಷಾ ಜಾಥಾ ನಡೆಯಿತು.

ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೋಲಿಸ್ ಇಲಾಖೆ ಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿ ಸಲಾಗಿದ್ದ ಜಾಥಾಕ್ಕೆ ಜಿಲ್ಲಾ ಎಸ್ಪಿ ಡಾ.ಸುಬ್ರಹ್ಮಣ್ಯೇಶವರ ರಾವ್ ಅವರು ಚಾಲನೆ ನೀಡಿದರು.ನಗರ ಸಂಚಾರ ನಿರೀಕ್ಷಕ ಮಂಜುನಾಥ ಶೆಟ್ಟಿ, ಆರ್ ಟಿ ಓ ಪುರುಷೋತ್ತಮ್ ಜೆ. ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಸುರಕ್ಷಿತ ಚಾಲನೆಯೇ ಜೀವ ರಕ್ಷೆ ಎಂಬ ಧ್ಯೇಯ ವಾಕ್ಯದೊಂದಿಗೆ ನಗರದ ಜ್ಯೋತಿ ವೃತ್ತದಿಂದ ಆರ್ ಟಿ ಓ ಕಛೇರಿ ವರೆಗೆ ಜಾಥಾ ನಡೆಯಿತು. ಜಿಲ್ಲಾ ಸ್ಕೌಟ್, ಗೈಡ್ಸ್,ಸೇರಿದಂತೆ ನಗರದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಬೀದಿ ನಾಟಕವನ್ನು ಪ್ರದರ್ಶಿಸಿದರು.