Thursday, February 18, 2010

ಸಂವಿಧಾನಕ್ಕೆ ಬದ್ಧರಾಗಿ ಕರ್ತವ್ಯ ನಿರ್ವಹಿಸಿ: ಜಸ್ಟಿಸ್ ಡಾ. ಎಸ್.ಆರ್.ನಾಯಕ್

ಮಂಗಳೂರು,ಫೆ.18: ಮಾನವ ಹಕ್ಕು ಆಯೋಗದಲ್ಲಿ 13,920 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಮಾನವಹಕ್ಕುಗಳ ಆಡಳಿತ ಜಾಗತಿಕವಾಗಿ, ರಾಷ್ಟ್ರೀಯವಾಗಿ ಮತ್ತು ರಾಜ್ಯ ಮಟ್ಟದಲ್ಲಿ ಭದ್ರವಾಗಿ ನೆಲೆಯೂರುವಂತೆ ಮಾಡಲು ಶ್ರಮಿಸುತ್ತಿದೆ ಎಂದು ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರಾದ ನಾಡೋಜ ನ್ಯಾಯಮೂರ್ತಿ ಡಾ.ಎಸ್.ಆರ್ ನಾಯಕ್ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಅಹವಾಲುಗಳೊಂದಿಗೆ ಬಂದವರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಬಳಿಕ ಪತ್ರಿಕಾ ಗೋಷ್ಠಿಯ ನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಅದರಲ್ಲೂ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ ಸಾಮರಸ್ಯ ಕದಡುತ್ತಿರುವ ಘಟನೆಗಳನ್ನು ಆಯೋಗ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಗೃಹ ಇಲಾಖೆಗೆ ಹಾಗೂ ರಾಜ್ಯ ಸರ್ಕಾರಕ್ಕೆ 2007ನೇ ಇಸವಿಯಿಂದ ನಡೆದ ಘಟನೆಗಳ ಬಗ್ಗೆ ವಿವರ ಕೇಳಿರುವುದಾಗಿ ಹೇಳಿದರು.
ಭಾರತದ ಪ್ರತಿಯೊಬ್ಬ ಪ್ರಜೆಯೂ ಸಂವಿ ಧಾನವನ್ನು ಗೌರವಿ ಸಬೇಕಿದ್ದು, ಆಡಳಿತ ಮತ್ತು ಅಧಿ ಕಾರಿಗಳು ಜನಹಿತವನ್ನು ಗಮನ ದಲ್ಲಿರಿಸಿ ಕರ್ತವ್ಯ ನಿರ್ವಹಿಸಬೇಕೆಂದು ಕರೆನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಅವರು ಉಪಸ್ಥಿತರಿದ್ದರು.