Friday, February 19, 2010

ಮಂಗಳೂರಿನಲ್ಲಿ ಫಲ ಪುಷ್ಪ ಪ್ರದರ್ಶನ



ಮಂಗಳೂರು ಫೆ, 19: ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಸಿರಿ ತೋಟಗಾರಿಕಾ ಸಂಘದ ಆಶ್ರಯದಲ್ಲಿ 2009 - 2010 ರ ಸಾಲಿನ ತೋಟಗಾರಿಕಾ ಫಲಪುಷ್ಪ ಪ್ರದರ್ಶನ ಮಂಗಳೂರಿನಲ್ಲಿ ಇಂದಿನಿಂದ ಆರಂಭ ಗೊಂಡಿದೆ. ಫೆಬ್ರವರಿ 23 ತನಕ ನಡೆಯುವ ಈ ಪ್ರದರ್ಶನದ ಉದ್ಘಾಟನಾ ಸಮಾರಂಭ ಕದ್ರಿ ಉದ್ಯಾನವನದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಭಂಡಾರಿ, ಶಾಸಕ ಯು.ಟಿ.ಖಾದರ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಎಚ್.ಎನ್.ಹೇಮಾ ಸೇರಿದಂತೆ ಅನೇಕ ಗಣ್ಯರು ಮತ್ತು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.