Tuesday, February 16, 2010

ಕಾನೂನು ಸಾಕ್ಷರತಾ ರಥ ಉದ್ಘಾಟನೆ..


ಮಂಗಳೂರು, ಫೆ,16, ದಕ್ಷಿಣ ಕನ್ನಡ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಿವಿಧ ಇಲಾಖೆಗಳ ಸಹ ಯೋಗದಲ್ಲಿ ಜಿಲ್ಲೆಯ ಜನ ಸಾಮಾನ್ಯರಿಗೆ ಕಾನೂನು ಮಾಹಿತಿ ನೀಡುವ ಸಲುವಾಗಿ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ಅಭಿಯಾನವನ್ನು ಇಂದಿನಿಂದ ಆರಂಭಿಸಿದ್ದು, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಎಹ್. ಆರ್. ದೇಶಪಾಂಡೆ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.ಜಿಲ್ಲಾಧಿಕಾರಿ ಪೊನ್ನು ರಾಜ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್. ಪಿ. ಚೆಂಗಪ್ಪ, ಮತ್ತಿತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.