Friday, March 5, 2010

16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ: ಪೂರ್ವಭಾವಿ ಸಭೆ

ಮಂಗಳೂರು,ಮಾರ್ಚ್ 5:16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಗರದ ಪುರಭವನದಲ್ಲಿ ಮಾರ್ಚ್ 15ರಿಂದ 3ದಿನಗಳ ಕಾಲ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದು ಎಸ್ ಡಿ ಎಂ ಕಾಲೇಜಿನ ಸಭಾಂಗಣದಲ್ಲಿ ಮಹಿಳಾ ಸಾಹಿತಿಗಳು ಮತ್ತು ಮಹಿಳಾ ಪರ ಸಂಘಟನೆಗಳ ಪದಾಧಿಕಾರಿಗಳ ಸಮಾಲೋಚನೆ ಸಭೆ ಮಂಗಳೂರು ಮೇಯರ್ ರಜನಿ ದುಗ್ಗಣ್ಣ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಮಾಲೊಚನಾ ಸಭೆಯಲ್ಲಿ ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಅವರು, ರಾಜ್ಯದಲ್ಲೇ ಮೊದಲ ಬಾರಿಗೆ ಅಹೋರಾತ್ರಿ ಸಮ್ಮೇಳನ ನಡೆಯಲಿದ್ದು,ಇದರಲ್ಲಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚಿಂತನಾಗೋಷ್ಥಿ, ಆಹಾರೋತ್ಸವಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಮೇಯರ್ ರಜನಿ ದುಗ್ಗಣ್ಣ ಅವರು, ಸಾಹಿತ್ಯ ಸಮ್ಮೇಳನದ ಪ್ರತಿನಿಧಿ ಕೂಪನ್ ಗಳನ್ನು ಬಿಡುಗಡೆ ಗೊಳಿಸಿದರು. ಸಭೆಯಲ್ಲಿ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಗಣೇಶ್ ಅಮೀನ್ ಸಂಕಮಾರ್, ಮಂಗಳೂರು ಸಾಹಿತ್ಯ ಪರಿಷತ್ ಅಧ್ಯಕ್ಷ ಸರ್ವೋತ್ತಮ ಅಂಚನ್, ಕಾಲೇಜಿನ ಪ್ರಾಂಶುಪಾಲರಾದ ದೇವರಾಜ್ ಪಾಲ್ಗೊಂಡಿದ್ದರು. ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ವಿಜಯಲಕ್ಷ್ಮಿ ಶೆಟ್ಟಿ ಸ್ವಾಗತಿಸಿದರು.