Friday, April 30, 2010

ತಾಲೂಕು ಸಾಹಿತ್ಯ ಸಮ್ಮೇಳನ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿಗಳಿಂದ ಚಾಲನೆ

ಮಂಗಳೂರು, ಏಪ್ರಿಲ್ 30: ಒಂದು ದಿನದ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಅವರು ಸಮ್ಮೇಳನಾಧ್ಯಕ್ಷ ಬೋಳ ಚಿತ್ತರಂಜನ್ ದಾಸ್ ಶೆಟ್ಟಿ ಅವರಿಗೆ ಪೇಟ ತೊಡಿಸಿ ಹಾರಹಾಕುವುದರ ಮುಖಾಂತರ ಚಾಲನೆ ನೀಡಿದರು.ಸಾಂಪ್ರಾ ದಾಯಿಕವಾಗಿ ನಿಗದಿತ ಸಮಯಕ್ಕೆ ಆರಂಭಗೊಂಡ ಕಾರ್ಯ ಕ್ರಮದಲ್ಲಿ ಸಮ್ಮೇಳ ನಾಧ್ಯಕ್ಷರ ಪತ್ನಿ ಕುಶಲ ಅವರೊಂದಿಗೆ ತೆರೆದ ಅಲಂಕರಿತ ವಾಹನದಲ್ಲಿ ಮೆರವಣಿಗೆಯಲ್ಲಿ ಪುರಭವನಕ್ಕೆ ಕರೆತರಲಾಯಿತು. ಮೇಯರ್ ರಜನಿದುಗ್ಗಣ್ಣ, ಉಪಮೇಯರ್ ರಾಜೇಂದ್ರ, ಶಾಸಕ ಯು ಟಿ ಖಾದರ್, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ, ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಸೇರಿದಂತೆ ಹಲವು ಸಾಹಿತ್ಯಾಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಪುರಭವನದ ಎದುರಿನಲ್ಲಿ ತುಳುನಾಡ ಸಂಸ್ಕೃತಿಯನ್ನು ಪ್ರತಿ ಬಿಂಬಿಸುವ ಆವರಣದಲ್ಲಿ ಮೇಯರ್ ರಜನಿ ದುಗ್ಗಣ್ಣ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ ಅವರು ಕನ್ನಡ ಧ್ವಜಾರೋಹಣ ಮಾಡಿದರು.