Saturday, May 15, 2010

ಮಂಗಳೂರಿನ ಮಾನವ ಸಂಪನ್ಮೂಲ ಅಭಿವೃದ್ದಿ ಕೇಂದ್ರಕ್ಕೆ ಸಿ.ಎಂ. ಭೇಟಿ


ಮಂಗಳೂರು, ಮೇ 15: ಮೇಲ್ದರ್ಜೆಗೆ ಏರಿಸಿ ಸಮಗ್ರವಾಗಿ ಅಭಿವೃದ್ದಿ ಪಡಿಸಿದ ಮಂಗಳೂರು ನಗರದಲ್ಲಿನ ರಾಜ್ಯದ ಮೊದಲ ಮಾನವ ಸಂಪನ್ಮೂಲ ಅಭಿವೃದ್ದಿ ಕೇಂದ್ರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಭೇಟಿ ನೀಡಿದರು. ಅಧಿಕಾರಿಗಳೊಂದಿಗೆ ಈ ಕೇಂದ್ರದ ಅಭಿವೃದ್ದಿ ಚಟುವಟಿಕೆಗಳ ಬಗ್ಗೆ ಚರ್ಚಿಸಿದ ಮುಖ್ಯಮಂತ್ರಿಗಳು, ಸ್ಥಳದಲ್ಲಿದ್ದ ಅಭ್ಯರ್ಥಿಗಳೊಂದಿಗೆ ವಿಚಾರವಿನಿಮಯ ನಡೆಸಿದರು.ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಜೆ. ಪಾಲೇಮಾರ್,ಜನಾರ್ದನ ರೆಡ್ಡಿ,ಮೇಯರ್ ರಜನಿ ದುಗ್ಗಣ್ಣ, ಶಾಸಕ ಎನ್. ಯೋಗಿಶ್ ಭಟ್,ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.