Friday, May 21, 2010

ಲೈಲಾ ಚಂಡಮಾರುತ: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಮಂಗಳೂರು, ಮೇ 21: ಲೈಲಾ ಚಂಡ ಮಾರುತದ ಹಿನ್ನಲೆಯಲ್ಲಿ ಪ್ರಕೃತಿ ವಿಕೋಪ ದಿಂದಾಗುವ ಹಾನಿಯ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು 24 ಗಂಟೆ ಕಂಟ್ರೋಲ್ ರೂಂ ಸ್ಥಾಪಿಸಲು ಹಾಗೂ ಮುನ್ನೆಚ್ಚರಿಕೆ ವಹಿಸುವಂತೆ ಕಂದಾಯ ಸಚಿವರೂ ಮಾರ್ಗದರ್ಶನ ನೀಡಿದ್ದಾರೆ.
ಪ್ರಕೃತಿ ವಿಕೋಪ ಸಂಭವಿಸಿದಾಗ ಪ್ರಥಮ ಮಾಹಿತಿ ಸರ್ಕಾರಕ್ಕೆ ಸಲ್ಲಿಸಿ, ರಕ್ಷಣೆ, ಪರಿಹಾರ ಕಾರ್ಯ,ಪರ್ಯಾಯ ವ್ವವಸ್ಥೆ ಬಗ್ಗೆ ಸಹಾಯಕ ಆಯುಕ್ತರು,ತಹಸೀಲ್ದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕೆಂದು ದ.ಕ. ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಅವರು ತಿಳಿಸಿದ್ದಾರೆ.