Monday, May 24, 2010

ಒಂದು ವಾರ ಶೋಕಾಚರಣೆ

ಮಂಗಳೂರು,ಮೇ24:ಬಜಪೆಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಡಿದವರ ಸ್ಮರಣಾರ್ಥ ಜಿಲ್ಲೆಯಲ್ಲಿ ದುರ್ಘಟನೆ ನಡೆದ ಮೇ 22 ರಿಂದ 28 ರವರೆಗೆ ಶೋಕಾಚರಣೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್ ಅವರು ಹೇಳಿದರು.ಈ ದಿನಗಳಲ್ಲಿ ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ಸಮಾರಂಭಗಳು ನಡೆಯುವುದಿಲ್ಲ ಎಂದಿರುವ ಅವರು, ಸಾರ್ವಜನಿಕರ ಸಹಕಾರವನ್ನು ಕೋರಿದ್ದಾರೆ. ಸಾರ್ವಜನಿಕರು ಯಾವುದೇ ಅದ್ದೂರಿ ಸಮಾರಂಭಗಳನ್ನು ಆಚರಿಸದಂತೆ ಅವರು ಮನವಿ ಮಾಡಿದ್ದಾರೆ.