Thursday, May 27, 2010

ಜಿಲ್ಲಾಡಳಿತದಿಂದ ಭಾವಪೂರ್ಣ ಶ್ರದ್ಧಾಂಜಲಿ


ಮಂಗಳೂರು, ಮೇ 27: ಬಜ್ಪೆಯಲ್ಲಿ ಮೇ 22 ರಂದು ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಮೃತ ಪಟ್ವವರ ಸ್ಮರಣಾರ್ಥ ಜಿಲ್ಲಾಡಳಿತ ಇಂದು ಭಾವಪೂರ್ಣ ಶ್ರದ್ದಾಂಜಲಿ ಮತ್ತು ಶೋಕ ಸಭೆಯನ್ನು ಏರ್ಪಡಿಸಿತ್ತು. ವಿಮಾನ ನಿಲ್ದಾಣದಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿಯಲ್ಲಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಸರ್ವಧರ್ಮ ಪ್ರಾರ್ಥನೆ ಮತ್ತು 2 ನಿಮಿಷ ಮೌನಾಚರಣೆ, ಪೊಲೀಸ್ ಬ್ಯಾಂಡ್ ಮೂಲಕ ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.