Saturday, June 12, 2010

'ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾಮಾಜಿಕ ಬದ್ಧತೆ ಅಗತ್ಯ'

ಮಂಗಳೂರು, ಏಪ್ರಿಲ್ 12:ಮಕ್ಕಳನ್ನು ಶಾಲೆಗೆ ಕಳುಹಿಸುವುದು ಸಾಮಾಜಿಕ ಹೊಣೆಯಾಗಿದ್ದು 14 ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ ಎಂದು ಮಂಗಳೂರು ನಗರ ಪೋಲಿಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹೇಳಿದರು.

ಸಂತ ಅಲೋಷಿಯಸ್ ಪ್ರೌಢಶಾಲೆಯ ಸಭಾಂಗಣದಲ್ಲಿ ಏರ್ಪಡಿಸಲಾದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚ ರಣೆಯನ್ನು ಉದ್ಘಾಟಿಸಿ ಸಿಂಗ್ ಮಾತನಾಡುತ್ತಿದ್ದರು. ಮಕ್ಕಳಿಂದ ಉತ್ಪಾದಿಸಲ್ಪಟ್ಟ ವಸ್ತುಗಳನ್ನ ಖರೀದಿಸದೆ, ಮಕ್ಕಳನ್ನು ಗೃಹಕೃತ್ಯಗಳಿಗೆ ಬಳಸಿಕೊಳ್ಳದೆ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸ ಬೇಕೆಂದರು. ಬಾಲಕಾರ್ಮಿಕ ಪದ್ಧತಿ ಮಕ್ಕಳ ಮಾರಾಟಕ್ಕೂ ಪ್ರೋತ್ಸಾಹ ನೀಡುತ್ತಿದ್ದು, ಕಾನೂನು ಪ್ರಕಾರ ಅಪರಾಧಗಳೆಂದು ಪರಿಗಣಿಸ ಲ್ಪಟ್ಟವನ್ನು ಸಮಾಜ ಪ್ರೋತ್ಸಾಹಿ ಸಬಾರದು ಎಂದ ಅವರು, ವಿಚಾರ ಜೂನ್ 12ರ ಈ ದಿನಾಚರಣೆ ಸಮಾಜಕ್ಕೆ ಸೂಕ್ತ ಸಂದೇಶವನ್ನು ನೀಡಬೇಕೆಂದರು. ಮುಖ್ಯ ಅತಿಥಿಗಳಾಗಿದ್ದ ಮನಾಪ ಆಯುಕ್ತರಾದ ಡಾ. ಕೆ.ಎಸ್. ವಿಜಯಪ್ರಕಾಶ್ ಅವರು ಮಾತನಾಡಿ, ವಿದ್ಯೆ, ಅವಕಾಶ ವಂಚಿತ ಜನರ ಬಗ್ಗೆ ಉಳ್ಳವರು ಚಿಂತಿಸಬೇಕು. ಸಮಸ್ಯೆಗೆ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆ ತಮ್ಮದೇ ಕೊಡುಗೆ ನೀಡಿದ್ದು, ಈ ಸಮಸ್ಯೆ ನಿವಾರಣೆಗೆ ಸಾಮಾಜಿಕ ಸಮಾನತೆಗೆ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಮಕ್ಕಳಿಗೆ ಉಚಿತ ಶಿಕ್ಷಣದಿಂದ ಹಿಡಿದು ಆರೋಗ್ಯ ಯೋಜನೆಗಳನ್ನು ಹಮ್ಮಿಕೊಂಡಿದೆ. ಸಾಮಾಜಿಕ ಅನಿಷ್ಠಗಳನ್ನು ನಿವಾರಿಸಲು ಆಂದೋಲನ ಮಾದರಿ ಕಾರ್ಯಕ್ರಮ ಗಳಾಗಬೇಕೆಂದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್. ಆರ್. ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ಸಾವಿರ ಮಕ್ಕಳ ಪಾಲಕರಿಂದ ಬಾಲಕಾರ್ಮಿಕ ಪದ್ಧತಿ ವಿರೋಧಿಸಿ ಘೋಷಣಾ ಪತ್ರವನ್ನು ಸ್ವೀಕರಿಸಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ವಿ.ಪಾಟೀಲ್, ಸಹಾಯಕ ಕಾರ್ಮಿಕ ಆಯುಕ್ತ ವೆಂಕಟೇಶ ಅಪ್ಪಯ್ಯ ಸಿಂಧಿ ಹಟ್ಟಿ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಾಮೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಎ. ಶಕುಂತಲ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್. ಪಿ.ಚಂಗಪ್ಪ ಮಾತನಾಡಿದರು. ಶಾಲಾ ಮುಖ್ಯೋಪಾ ಧ್ಯಾಯರಾದ ವಂದನೀಯ ಮೆಲ್ವಿನ್ ಪಿಂಟೋ ಉಪಸ್ಥಿತರಿದ್ದರು. ಶಾಲೆಯ ಸಂಪನ್ಮೂಲ ವ್ಯಕ್ತಿಯಾಗಿ ಎಂ. ಪುರುಷೋತ್ತಮ ಭಟ್ ಮಾತನಾಡಿದರು. ಕಾರ್ಮಿಕ ಅಧಿಕಾರಿ ಗೋಪಾಲಗೌಡ ಸ್ವಾಗತಿಸಿದರು. ಹಿರಿಯ ನಿರೀಕ್ಷಕ ಕೆ. ಎಸ್. ಸತ್ಯ ನಾರಾಯಣ ವಂದಿಸಿದರು.