Thursday, June 24, 2010

'ಸ್ವಚ್ಛ ಪರಿಸರದಿಂದ ಆರೋಗ್ಯವಂತ ಸಮಾಜ'

ಮಂಗಳೂರು, ಜೂನ್ 24:ಸ್ವಚ್ಛತೆಯ ಪಾಠ ಮಕ್ಕಳಿಗೆ ಎಳೆವೆಯಲ್ಲೇ ಕಲಿಸಬೇಕು. ಮನೆ, ವಠಾರ, ಶಾಲಾ ಸ್ವಚ್ಛತೆಯಿಂದ ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಿದ್ದರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಕ್ಷೇತ್ರ ಪ್ರಚಾರಾಧಿಕಾರಿ ಟಿ ಬಿ. ನಂಜುಂಡಸ್ವಾಮಿ ಹೇಳಿದರು.

ಅವರಿಂದು ಮಂಗಳೂರು ತಾಲೂಕಿನ ಬಡಗುಳಿ ಪಾಡಿ ಗ್ರಾಮದ ಗುರು ಕಂಬಳದ ಎಕೆಯು ಪ್ರೌಢ ಶಾಲೆಯಲ್ಲಿ ಕ್ಷೇತ್ರ ಪ್ರಚಾರ ನಿರ್ದೇಶ ನಾಲಯ ಮತ್ತು ವಾರ್ತಾ ಇಲಾಖೆ ಏರ್ಪಡಿಸಿದ್ದ ಪರಿಸರ ದಿನಾಚರಣೆ ಸಂಬಂಧ ವಿಚಾರ ಸಂಕಿರಣದಲ್ಲಿ ಮಾತ ನಾಡುತ್ತಿದ್ದರು. ಬೆಳೆಯುವ ಸಿರಿ ಮೊಳಕೆಯಲ್ಲೇ, ಮಕ್ಕಳು ನಮ್ಮ ಭವಿಷ್ಯ ಈ ಮಕ್ಕಳಿಗೆ ಪಠ್ಯದ ಜೊತೆಗೆ ಪರಿಸರದ ಬಗ್ಗೆ ಮಾಹಿತಿ ನೀಡುವುದು ಎಲ್ಲರ ಕರ್ತವ್ಯ ಎಂದರು.
ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಓಸ್ವಾಲ್ಡ್ ರೋಡ್ರಿಗಸ್ ಅವರು, ಮಕ್ಕಳು ಶುಭ್ರವಾಗಿದ್ದು, ಶಾಲಾ ಆವರಣದಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಎಂದರು. ಎಲ್ಲೆಂದರಲ್ಲಿ ಕಸ ಹಾಕುವುದು; ಅಸ್ವಚ್ಛ ಪರಿಸರದಿಂದ ಆರೋಗ್ಯದ ಮೇಲಾಗುವ ಹಾನಿಯ ಬಗ್ಗೆ ಮಕ್ಕಳಿಗೆ ವಿವರಿಸಿದರು.
ಸಮಾರಂಭದ ಮುಖ್ಯ ಅತಿಥಿ ಯಾಗಿದ್ದ ವಾರ್ತಾಧಿಕಾರಿ ರೋಹಿಣಿ ಮಕ್ಕಳನ್ನು ಉದ್ದೇಶಿಸಿ ಮಾತ ನಾಡಿದರು. ನಿವೃತ್ತ ಶಿಕ್ಷಕ ಅನಂತರಾಮ ಅವರು ಸಂಪನ್ಮೂಲ ವ್ಯಕ್ತಿ ಯಾಗಿದ್ದರು. ಕಾರ್ಯ ಕ್ರಮದಲ್ಲಿ ಪರಿಸರ ಸಂಬಂಧ ಏರ್ಪಡಿಸಲಾದ ಭಾಷಣ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ನೌರೀನ್, ಸುನೇವಾ, ಮರ್ಝೀಯಾಭಾನು, ಅಥಾವುಲ್ಲಾ ಅವರಿಗೆ ಬಹುಮಾನ ವಿತರಿಸಲಾಯಿತು. ಕ್ಷೇತ್ರ ಪ್ರಚಾರ ಇಲಾಖಾ ವತಿಯಿಂದ ಸ್ವಚ್ಛತೆ ಮತ್ತು ಆರೋಗ್ಯ ಕುರಿತ ಚಲನ ಚಿತ್ರ ಪ್ರದರ್ಶಿಸಲಾಯಿತು. ವಾರ್ತಾ ಇಲಾಖೆ ಜನಪದ ಕಲಾವಿದರು ಸ್ವಚ್ಛತೆ ಕುರಿತ ಪದಗಳನ್ನು ಹಾಡಿದರು. ಪ್ರೌಢಶಾಲೆಯ ಕನ್ನಡ ಅಧ್ಯಾಪಕರಾದ ಮಾಧವ ಮಯ್ಯ ಅವರು ಕಾರ್ಯಕ್ರಮ ನಿರೂಪಿಸಿದರು. ಗಣಿತ ಪ್ರಾಧ್ಯಾಪಕರಾದ ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಿಸಿದರು. ಶಾಲೆಯ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.