

ಈಗಾಗಲೇ ಅಸ್ತಿತ್ವಕ್ಕೆ ಬಂದಿರುವ ಟಾಸ್ಕ್ಫೋ ಫೋರ್ಸ್ ನ ಒಳಗೆ ಪ್ರತ್ಯೇಕ ತಂಡವನ್ನು ರಚಿಸಲಾಗುವುದು. ಮಂಗಳೂರು ಸಹಾಯಕ ಕಮಿಷನರ್ ಮರಳು ಸಾಗಾಟ ಸಂಬಂಧಿಸಿದ ವಿಷಯಗಳಿಗೆ ನೋಡೆಲ್ ಅಧಿಕಾರಿಯಾಗಿರುತ್ತಾರೆ ಎಂದರು.ಜಿಲ್ಲೆಯ ಗಡಿಗಳ ತಪಾಸಣಾ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳ ಮೇಲೆ ಜವಾಬ್ದಾರಿಯನ್ನು ನಿಗದಿಪಡಿಸಲಾಗಿದೆ ಎಂದು ನುಡಿದ ಜಿಲ್ಲಾಧಿಕಾರಿಯವರು, ಕೇರಳಕ್ಕೆ ಅಕ್ರಮ ಸಾಗಾಟ, ಅಲ್ಲಲ್ಲಿ ಅಕ್ರಮ ದಾಸ್ತಾನು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಪಿಎಸ್ ಅಳವಡಿಕೆ ಮತ್ತು ಮರಳು ಸಾಗಾಟ ಲಾರಿಗಳಿಗೆ ಪ್ರತ್ಯೇಕ ಬಣ್ಣ ಹಚ್ಚುವ ಕ್ರಮಕ್ಕೆ ಮುಂದಾಗಿರುವುದಾಗಿ ನುಡಿದರು.ಮುಂದಿನ 15 ದಿನಗಳೊಳಗಾಗಿ ಮರಳು ಸಾಗಾಟ ಕುರಿತು ನಿಯಮಾವಳಿಗಳನ್ನು ರೂಪಿಸಿ ಪ್ರಕಟಿಸಲಾಗುವುದು ಎಂದು ಹೇಳಿದ ಜಿಲ್ಲಾಧಿಕಾರಿಯವರು, ವಾಹನಗಳಿಗೆ ಜಿಪಿಎಸ್ ಅಳವಡಿಸುವ ಕುರಿತಂತೆ ಸರಕಾರದ ಮಟ್ಟದಲ್ಲಿಯೂ ಚಿಂತನೆ ನಡೆದಿದೆ ಎಂದರು.
ಅಪರ ಜಿಲ್ಲಾಧಿಕಾರಿ ಎಸ್.ಎ. ಪ್ರಭಾಕರ ಶರ್ಮ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಉಪಸ್ಥಿತರಿದ್ದರು.