Wednesday, August 4, 2010

ಅಕ್ರಮ ಮರಳು ಸಾಗಾಣಿಕೆ ನಿಯಂತ್ರಿಸಿ: ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ಮಂಗಳೂರು,04: ಅಕ್ರಮ ಮರಳು ಸಾಗಾಣಿಕೆ ನಿಷೇಧಿಸಿ ರಾಜ್ಯ ಸರಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಜಿಲ್ಲೆಯಿಂದ ಕೇರಳಕ್ಕೆ ಮರಳು ಸಾಗಾಣಿಕೆ ಮಾಡುವುದನ್ನು ಸಂಪೂರ್ಣವಾಗಿ ತಡೆಯಲು ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಎಸ್. ರಾಮಪ್ರಸಾದ್ ಅವರು ಸೂಚಿಸಿದರು.
ಇಂದು ಮಂಗಳೂರನಲ್ಲಿ ಜಿಲ್ಲಾಧಿ ಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಧಿಕಾರಿ ಗಳೊಂದಿಗೆ ನಡೆದ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಮಾತ ನಾಡುತ್ತಿದ್ದ ಅವರು, ಸರಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಅಧಿಕಾರಿಗಳು ಪಾಲಿಸಿ ಜಿಲ್ಲೆಯ ಅಭಿವೃದ್ಧಿಗೆ ನೆರವಾಗ ಬೇಕೆಂದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವಿ.ಪೊನ್ನುರಾಜ್ ಅವರು, ಮರಳು ಸಾಗಾಣಿಕೆ ತಡೆಗೆ ಟಾಸ್ಕ್ ಫೋರ್ಸ್(ಕಾರ್ಯ ಪಡೆ) ರಚಿಸ ಲಾಗಿದ್ದು, ಗಡಿಯಲ್ಲಿ ಚೆಕ್ ಪೋಸ್ಟ್ ಗಳಿವೆ; ಆದರೆ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಬಂದೋಬಸ್ತು ಮಾಡುವ ಅಗತ್ಯವಿದೆ. ಇದಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕರ್ನಾಟಕ ಸಾರಿಗೆ ಇಲಾಖೆ, ಪೊಲೀಸ್ ಮತ್ತು ಅರಣ್ಯ ಇಲಾಖೆ, ಕಮರ್ಶಿಯಲ್ ಟ್ಯಾಕ್ಸ್( ವಾಣಿಜ್ಯ ತೆರಿಗೆ) ಉದ್ಯೋಗಿಗಳನ್ನು ಒಳಗೊಂಡ 24 ಗಂಟೆ ಕರ್ತವ್ಯ ನಿರ್ವಹಿಸುವ ಟಾಸ್ಕಫೋರ್ಸನ್ನು ಚೆಕ್ ಪೋಸ್ಟ್ ನಲ್ಲಿ ನಿಯೋಜಿಸಲು ಉದ್ದೇಶಿಸ ಲಾಗಿದೆ ಎಂದರು. ಈ ಕ್ರಮದ ಬಳಿಕವೂ ಜನರಿಂದ ಅಕ್ರಮ ಮರಳು ಸಾಗಾಣಿಕೆ ಬಗ್ಗೆ ದೂರು ಬಂದರೆ ಕೇರಳ ಸರಕಾರದಿಂದ ಮಾಹಿತಿ ಹಕ್ಕಿನಡಿ(RTI) ಮರಳು ಲಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಕಠಿಣ ಕ್ರಮ ಜರುಗಿ ಸುವುದಾಗಿ ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು. ಅಧಿಕಾರಿಗಳು ಸರಕಾರದ ಆದೇಶ ಪಾಲಿಸಲು ಆಸಕ್ತಿಯಿಂದ ಕರ್ತವ್ಯದಲ್ಲಿ ತೊಡಗಿ ಕೊಳ್ಳಬೇಕೆಂದರು. ಸಾರಿಗೆ ಇಲಾಖೆಯವರು ವಾಹನಗಳ ದುರ್ಬಳಕೆಯ ಬಗ್ಗೆ ಮಾಹಿತಿ ಕಲೆ ಹಾಕುವ ಅಗತ್ಯವಿದೆ ಎಂದೂ ಜಿಲ್ಲಾಧಿಕಾರಿಗಳು ಹೇಳಿದರು,
ಈ ಸಂಬಂಧ ಮೇಲ್ಕಂಡ ಇಲಾಖೆಗಳ ಮುಖ್ಯಸ್ಥರೊಂದಿಗೆ ಬೆಂಗಳೂರಿನಲ್ಲೂ ಚರ್ಚೆ ನಡೆಸಲಾಗಿದೆ. ಜಿಪಿಎಸ್(Global Positioning System) ನ್ನು ರಾಜ್ಯ ಮಟ್ಟದಲ್ಲೂ ಅಳವಡಿಸಲು ಯೋಜನೆ ರೂಪಿಸಲಾಗಿದೆ ಎಂದು ಉಸ್ತುವಾರಿ ಕಾರ್ಯದರ್ಶಿಗಳು ಹೇಳಿದರು. ಸುಮಾರು ಒಂದೂವರೆ ಗಂಟೆ ಕಾಲ ನಗರದ ಹಾಗೂ ಜಿಲ್ಲೆಯ ರಸ್ತೆಗಳ ಬಗ್ಗೆ ಸವಿವರ ಚರ್ಚೆ ನಡೆದು, ರಾಷ್ಟ್ರೀಯ ಹೆದ್ದಾರಿ(NH) ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHI) ಮಾಡುವ ಪಾಪದ ಕೆಲಸದಿಂದ ದಿನನಿತ್ಯ ಜನರ ದೂರು ಸ್ವೀಕರಿಸುವುದೇ ದೊಡ್ಡ ಕೆಲಸವಾಗಿದೆ ಎಂದು ಜಿಲ್ಲಾಧಿಕಾರಿಗಳು ಉಸ್ತುವಾರಿ ಕಾರ್ಯದರ್ಶಿಗಳ ಗಮನ ಸೆಳೆದರು. ನಗರದ ನಂತೂರು-ಕುಲಶೇಖರ ವ್ಯಾಪ್ತಿಯಲ್ಲಿ ರಸ್ತೆಯೇ ಇಲ್ಲ; ಬಿ.ಸಿ. ರೋಡು ಮಂಗಳೂರು ಪ್ರಯಾಣ, ಪಂಪವೆಲ್ ನಿಂದ ತಲಪಾಡಿವರೆಗಿನ ಪ್ರಯಾಣ ಅತ್ಯಂತ ಕಷ್ಟಕರವಾಗಿದೆ ಎಂದ ಜಿಲ್ಲಾಧಿಕಾರಿಗಳು ಈ ರಸ್ತೆಗಳ ತಕ್ಷಣದ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಳೆದ ಸಭೆಯ ಬಳಿಕದ ಪ್ರಗತಿ ವರದಿಯನ್ನು ಸಭೆಗೆ ನೀಡಿದರು. ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳು ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತಂದು ಪರಿಹರಿಸುವ ಭರವಸೆಯನ್ನು ನೀಡಿದರು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ 596.25 ಕಿ.ಮೀ ರಾಜ್ಯ ರಸ್ತೆ ಇದೆ ಎಂದ ಅವರು, ಬಜಪೆ-ಮರವೂರು, ಕಂದಾವರ, ಪರಾರಿ-ಉಳಾಯಿಬೆಟ್ಟು, ನೀರುಮಾರ್ಗ-ಅಡ್ಯಾರು ರಸ್ತೆಗಳನ್ನು ತುರ್ತು ದುರಸ್ತಿ ಪಡಿಸಬೇಕಾದ ಅಗತ್ಯವಿದೆ ಎಂದರು. ಎಂ ಆರ್ ಪಿ ಎಲ್ ಮತ್ತು ಎನ್ ಎಂ ಪಿ ಟಿ ಗೆ ಹೋಗುವ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದಾಗುವ ಸಮಸ್ಯೆ ಬಗ್ಗೆ ಡಿಸಿಪಿ (ಅಪರಾಧ ಮತ್ತು ಸಂಚಾರ) ಮುತ್ತೂರಾಯ ಅವರು ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿರುವ ರಸ್ತೆಯ ಬಗ್ಗೆಯೂ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನಲ್ಲಿ ಸಂಸದರ ಅಧ್ಯಕ್ಷತೆಯಲ್ಲಿ ನಡೆದ ಅಭಿವೃದ್ಧಿ ಸಭೆಯಲ್ಲಿ ಎಂ ಎಸ್ ಇ ಝಡ್ ರಸ್ತೆಗೆ ಗೋಡೆ ಕಟ್ಟಿರುವ ಬಗ್ಗೆ ಉಸ್ತುವಾರಿ ಕಾರ್ಯ ದರ್ಶಿಗಳ ಗಮನ ಸೆಳೆದಾಗ ಸರಕಾರದ ಅನುಮತಿ ಇಲ್ಲದೆ ರಸ್ತೆಗೆ ಗೋಡೆ ಕಟ್ಟಲು ಅಧಿಕಾರವಿಲ್ಲ; ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.ಜಿಲ್ಲೆಯಲ್ಲಿ 17,926 ಪಡಿತರ ಚೀಟಿಗಳನ್ನು ವಿತರಿಸಿದ್ದು 8,437 ಪಡಿತರ ಚೀಟಿ ನೀಡಬೇಕಾಗಿದೆ. ತಾಂತ್ರಿಕ ಸಮಸ್ಯೆ ಯಿಂದಾಗಿ ಚೀಟಿಗಳು ಬರಲಿಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.ಅಂಗನ ವಾಡಿಗಳ ಸಮಸ್ಯೆಗಳನ್ನು ಪರಿಹರಿಸಲು ಸಭೆ ಕರೆದು ಮಾಹಿತಿ ಪಡೆದು ಜಿಲ್ಲಾಧಿಕಾರಿಗಳ ಸಮಗ್ರ ಮಾಹಿತಿ ನೀಡಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು. ಜಿಲ್ಲೆಯಲ್ಲಿ 96% ಎಪಿಕ್ ಕಾರ್ಡ್ ಇರುವ ಬಗ್ಗೆ ಸಭೆಗೆ ಮಾಹಿತಿ ನೀಡಲಾಯಿತು. ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ ಮತ್ತು ವರ್ಗಗಳ ಇಲಾಖೆಯ ಅಧಿಕಾರಿಗಳಿಂದ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮಾಹಿತಿ ಪಡೆದರು. ಸಣ್ಣ ನೀರಾವರಿ ಇಲಾ0ಖೆ ಹಮ್ಮಿಕೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಉಪ್ಪು ನೀರು ತಡೆಗೆ, ಹಲಗೆ ಹಾಕಲು, ಸಣ್ಣ ನೀರಿನ ಒಡ್ಡುಗಳನ್ನು ನಿರ್ಮಿಸುವ ಬಗ್ಗೆ ಅಧಿಕಾರಿಗಳಿಂದ 15 ದಿನಗಳೊಳಗೆ ಮಾಹಿಸಿ ನೀಡಲು ಸೂಚಿಸಿದರು. ತೋಟಗಾರಿಕಾ ಇಲಾಖೆಯಡಿ ಫಲಾನುಭವಿಗಳಿಗೆ ಇರುವ ಯೋಜನೆಗಳ ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿಗಳು, ಯೋಜನೆಗಳ ಅನುಷ್ಠಾನದ ಬಗ್ಗೆ, ಸ್ಥಳ ಪರಿಶೀಲನೆ ಹಾಗೂ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲು ಸೂಚಿಸಿದರು. ಇಲಾಖೆ ಪುನಶ್ಚೇತನಕ್ಕೆ ಇನ್ನಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು. ಕೃಷಿ ಇಲಾಖೆ ಪ್ರಗತಿ ಪರಿಶೀಲಿಸಿದ ಅವರು, ಕಾಂಪ್ಲೆಕ್ಸ್ ಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಹೆಚ್ಚಿನ ಇಲಾಖೆಗಳಲ್ಲಿ ಮಾನವ ಸಂಪನ್ಮೂಲದ ಕೊರತೆಯಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಕಾರ್ಮಿಕ ಇಲಾಖೆ ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆಯಡಿ ಬಿಪಿಎಲ್ ಹೊಂದಿರುವ 24,903 ಕುಟುಂಬಗಳನ್ನು ಸೇರಿಸಿಕೊಂಡಿದ್ದು, 77,000 ಅವಲಂಬಿತರು ಯೋಜನಯಡಿ ಸೇರ್ಪಡೆ ಗೊಂಡಿದ್ದಾರೆಂದು ಕಾರ್ಮಿಕ ಇಲಾಖಾಧಿಕಾರಿ ಮಾಹಿತಿ ನೀಡಿದರು. 7,400 ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಸಿ ಕೊಂಡಿದ್ದಾರೆ. ಪಾಲಿಕೆ ಮತ್ತು ಲೋಕೋಪಯೋಗಿ ಇಲಾಖೆ ಈ ಸಂಬಂಧ ನೆರವಾಗಬೇಕೆಂದು ಅವರು ಕೋರಿದರು. ನಗರದಲ್ಲಿ ಮಲೇರಿಯಾ ತಡೆಗಟ್ಟುವಿಕೆ ಒಂದು ಸವಾಲಾಗಿದ್ದು, ನಗರಪಾಲಿಕೆಯವರು ತಮ್ಮ ಮಲೇರಿಯಾ ತಂಡವನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿ ಆರೋಗ್ಯ ಇಲಾಖೆಯೇ ಸಮಗ್ರವಾಗಿ ಮಲೇರಿಯಾ ತಡೆಗೆ ಕಾರ್ಯಯೋಜನೆ ರೂಪಿಸುವಂತೆ ಆದೇಶಿಸುವುದಾಗಿ ಜಿಲ್ಲಾಧಿಕಾರಿಗಳು ಹೇಳಿದರು.
ಮೀನುಗಾರಿಕೆ, ಶಿಕ್ಷಣ, ಕೈಗಾರಿಕೆ ಇಲಾಖೆಗಳ ಪ್ರಗತಿಯನ್ನು ಉಸ್ತುವಾರಿ ಕಾರ್ಯದರ್ಶಿಗಳು ಪರಿಶೀಲಿಸಿದರು. ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್ ವಂದಿಸಿದರು. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.