Sunday, August 15, 2010

ಪರಿಸರ ನಾಶ ತಡೆಗೆ ಗ್ರೀನ್ ಪೊಲೀಸ್ ವ್ಯವಸ್ಥೆ:ಸಚಿವ ಪಾಲೆಮಾರ್

ಮಂಗಳೂರು,ಆ.15:ಕಡಲತೀರದ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯಲು ಪರಿಸರದ ಮೇಲಾಗುತ್ತಿರುವ ನಾಶವನ್ನು ತಡೆಗಟ್ಟುವ ಉದ್ದೇಶದಿಂದ ಪರಿಸರ ಇಲಾಖೆಯು ಗ್ರೀನ್ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಂದರು ಮತ್ತು ಪರಿಸರ ಸಚಿವರಾದ ಜೆ.ಕೃಷ್ಣ ಪಾಲೆಮಾರ್ ಅವರು ಹೇಳಿದರು.


ಇಂದು ನಗರದ ನೆಹರು ಮೈದಾನ ದಲ್ಲಿ ರಾಷ್ಟ್ರ ಧ್ವಜಾ ರೋಹಣ ಮಾಡಿ ಪರೇಡ್ ವೀಕ್ಷಣೆ ನಡೆಸಿ ಸ್ವಾತಂತ್ರ್ಯೋ ತ್ಸವ ಸಂದೇಶ ನೀಡಿದ ಸಚಿವರು, ಪರಿಸರ ಮಾಲಿನ್ಯ ನಿಯಂತ್ರಣ ವನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಕೈ ಜೋಡಿಸುವಂತೆ ನಿಯಮ ಗಳನ್ನು ಸರಳೀಕ ರಣಗೊ ಳಿಸಿದೆ ಎಂದರು. ರಾಜ್ಯದಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆಯ ಹಿತದೃಷ್ಟಿಯಿಂದ ಸುಬ್ರಹ್ಮಣ್ಯ ಮೀಸಲು ಅರಣ್ಯದ ದೇವರ ಗದ್ದೆ ಎಂಬಲ್ಲಿ 200 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಇದೇ ರೀತಿ ಶ್ರೀಗಂಧದ ಅಭಿವೃದ್ಧಿಯ ಮತ್ತು ಕಳ್ಳ ಸಾಗಾಣಿಕೆ ಹಾಗೂ ಅಕ್ರಮ ಕಡಿತವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಶ್ರೀಗಂಧದ ಎಸ್ಟೇಟ್ ರಚಿಸುವ ಯೋಜನೆ ಹಮ್ಮಿ ಕೊಳ್ಳಲಾಗಿದೆ ಎಂದರು.ಕರಾವಳಿಯ ಸಮಗ್ರ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಅನೇಕ ಜನಕಲ್ಯಾಣ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
64ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ದೇಶದ ಸ್ವಾತಂತ್ರ್ಯಕ್ಕೆ ಬಲಿದಾನಗೈದ ಎಲ್ಲ ಮಹಾನ್ ಚೇತನಗಳನ್ನು ನೆನೆದು ಗೌರವ ಸಮರ್ಪಿಸಿದ ಸಚಿವರು, ಅಮೂಲ್ಯ ಸ್ವಾತಂತ್ರ್ಯವನ್ನು ನಿರಂತರ ಕಾಪಾಡುವ ಹೊಣೆ ಎಲ್ಲರದ್ದು ಎಂಬುದನ್ನು ಜ್ಞಾಪಿಸಿದರು.
ಜಿಲ್ಲೆಯ ವಸತಿ ಸಮಸ್ಯೆಯನ್ನು ನಿವಾರಿಸಲು ವಿವಿಧ ಯೋಜನೆಯಡಿ ರೂ.25.66 ಕೋಟಿ ವೆಚ್ಚದಲ್ಲಿ 7,276 ಫಲಾನುಭವಿಗಳಿಗೆ ವಸತಿ ಹಾಗೂ 5,255 ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗಿದೆ. ವಾಜಪೇಯಿ ನಗರಾಶ್ರಯ ಯೋಜನೆಯಡಿ ಮಹಾನಗರಪಾಲಿಕೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ಜಿಲ್ಲೆಗೆ ಈ ವರ್ಷ 2,650 ನಿವೇಶನಗಳು ಹಾಗೂ 1325 ವಸತಿಗಳನ್ನು ಒದಗಿಸಲು ನಿರ್ಧರಿಸಿದೆ. ಬಸವ ಇಂದಿರಾ ವಸತಿ ಯೋಜನೆಯಡಿ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ 1000 ಮನೆ ನಿರ್ಮಾಣ ಗುರಿ ಹೊಂದಿದೆ. ರಾಜ್ಯವನ್ನು ಗುಡಿಸಲು ರಹಿತ ರಾಜ್ಯವನ್ನಾಗಿ ಪರಿವರ್ತಿಸುವತ್ತ ಕ್ರಾಂತಿಕಾರಿ ಹೆಜ್ಜೆ ಇಡಲಾಗಿದೆ ಎಂದರು.
ಸಮಾ ರಂಭದಲ್ಲಿ ಗ್ರಾಹಕ ಕೈ ಗನ್ನಡಿ ಪುಸ್ತಕ ಬಿಡುಗಡೆ ಹಾಗೂ ರಾಜ್ಯ ಮಟ್ಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿ ಗಳಿಗೆ ಪ್ರಶಸ್ತಿ ಪತ್ರ ವಿತರಣೆ ನಡೆಯಿತು. ಸಮಾ ರಂಭದಲ್ಲಿ ಮಂಗಳೂರು ಮೇಯರ್ ರಜನಿ ದುಗ್ಗಣ್ಣ,ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಎನ್. ಯೋಗಿಶ್ ಭಟ್,ಯು.ಟಿ.ಖಾದರ್,ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಿ.ನಾಗರಾಜ ಶೆಟ್ಟಿ, ಜಿಲ್ಲಾಧಿಕಾರಿ ಪೊನ್ನುರಾಜ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಭಂಡಾರಿ,ಮಂಗಳೂರು ಪೋಲಿಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್,ಎಸ್ಪಿ ಡಾ.ಸುಬ್ರಹಣ್ಯೇಶ್ವರ ರಾವ್,ಜಿಲ್ಲಾ ಪಂಚಾಯತ್ ಸಿಇಒ ಶಿವಶಂಕರ್,ಪಾಲಿಕೆ ಕಮೀಷನರ್ ಡಾ.ವಿಜಯ ಪ್ರಕಾಶ್, ಸೇರಿದಂತೆ ಅನೇಕ ಗಣ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.