Wednesday, August 25, 2010

ಪ್ಲಾಸ್ಟಿಕ್ ಮುಕ್ತ ಪರಿಸರದಿಂದ ಆರೋಗ್ಯವಂತ ಸಮಾಜ

ಮಂಗಳೂರು,ಆಗಸ್ಟ್ 25: ಆರೋಗ್ಯ ಪೂರ್ಣ ಸಮಾಜಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ ಅತ್ಯಗತ್ಯ ಎಂದು ಜಿಲ್ಲಾ ಪಂಚಾಯತ್ ಸದಸ್ಯರಾದ ಎ ಸಿ ಭಂಡಾರಿ ಹೇಳಿದರು.ಅವರಿಂದು ಇರಾ ಗ್ರಾಮಪಂಚಾಯತ್ ಪರಪ್ಪುವಿನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಜನಶಿಕ್ಷಣ ಟ್ರಸ್ಟ್ ಹಾಗೂ ಇರಾ ಗ್ರಾಮಪಂಚಾಯತ್ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ 'ಪರಿಸರ ಸಂರಕ್ಷಣೆಗೆ ಪ್ಲಾಸ್ಟಿಕ್ ನಿರ್ಮೂಲನೆ' ವಿಷಯದ ಕುರಿತ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸ್ವಚ್ಛತೆ ಎಂಬುದು ನಿರಂತರ ವ್ಯವಸ್ಥೆ ಯಾಗಿದ್ದು, ಇದಕ್ಕೆ ಜನರ ಸಹಕಾರ ಅಗತ್ಯ. ಇರಾ ಗ್ರಾಮ ಪಂಚಾಯತ್ ಪ್ಲಾಸ್ಟಿಕ್ ನಿರ್ಮೂಲನೆಯಲ್ಲಿ ತನ್ನ ವಿಶಿಷ್ಟ ಮಾದರಿ ಗಳಿಂದ ರಾಷ್ಟ್ರದಾ ದ್ಯಂತ ಹೆಸರು ಮಾಡಿದ್ದು, ಈ ಹೆಸರು ಶಾಶ್ವತ ವಾಗಿರ ಬೇಕಾದರೆ ಜಾಗೃತ ಜನರ ಅಗತ್ಯವಿದೆ; ಇಂತಹ ಕಾರ್ಯ ಕ್ರಮಗಳಿಂದ ಅಗತ್ಯ ಸಂದೇಶ ರವಾನೆಯಾಗಿ ಜಾಗೃತಿ ನಿರಂತರ ವಾಗಿರುತ್ತದೆ. ಪ್ಲಾಸ್ಟಿಕ್ ಜನರ ಬದುಕಿಗೆ ಮಾರಕವಾಗಿದ್ದು, ಜನರು ಈ ಬಗ್ಗೆ ತಿಳಿದುಕೊಂಡು ಪ್ಲಾಸ್ಟಿಕ್ ತ್ಯಾಜ್ಯ ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಬೇಕೆಂದರು. ಮುಖ್ಯ ಅತಿಥಿಗಳಾಗಿದ್ದ ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಕೆ.ಚಂದ್ರಹಾಸ ಕರ್ಕೇರಾ ಅವರು, ಪ್ಲಾಸ್ಟಿಕ್ ನಿರ್ಮೂಲನೆಯಲ್ಲಿ ಇರಾದ ಇಚ್ಛಾ ಶಕ್ತಿ ನಿರಂತರವಾಗಿ ಮುಂದುವರಿಯಲಿದೆ ಎಂದರು. ಇನ್ನೋರ್ವ ಮುಖ್ಯ ಅತಿಥಿಗಳಾದ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಡಿ ಶೆಟ್ಟಿ ಅವರು, ಸುಜ್ಞಾನದಿಂದ ಮಾತ್ರ ನಮ್ಮ ಉಳಿವು; ದೇವರು ನಿರ್ಮಿಸಿದ ರಾಜ್ಯವನ್ನು ಪ್ಲಾಸ್ಟಿಕ್ ನಂತಹ ಮಾರಕಾಸುರನ ಕೈಯ್ಯಿಂದ ಮುಕ್ತ ಗೊಳಿಸುವ ಅಗತ್ಯದ ಬಗ್ಗೆ ಬೆಳಕು ಚೆಲ್ಲಿದರು. ವಾರ್ತಾ ಧಿಕಾರಿ ರೋಹಿಣಿ ಪ್ರಾಸ್ತಾವಿಕ ನುಡಿಗಳ ನ್ನಾಡಿದರು.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನೇಮು ಪೂಜಾರಿ ಮಾತ ನಾಡಿದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಅಬ್ದುಲ್ ರಝಾಕ್ ಅಧ್ಯಕ್ಷೀಯ ಭಾಷಣ ಗೈದರು. ಶ್ರೀ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಸಂಯೋಜಕ ವರದರಾಜ್, ಶಾಲಾ ಭಿವೃದ್ಧಿ ಸಮಿತಿ ಅಧ್ಯಕ್ಷ ಮೊಯ್ದಿನ್ ಕುಂಞ, ಶಾಲಾ ಮುಖ್ಯೋಪಾಧ್ಯಾಯರಾದ ರೋಹಿಣಿ ಎನ್ ಉಪಸ್ಥಿತರಿದ್ದರು. ಜನಶಿಕ್ಷಣ ಟ್ರಸ್ಟ್ ನ ಸಂತೋಷ್ ಉಪನ್ಯಾಸ ನೀಡಿದರು. ಇಲಾಖೆಯ ಸಿನಿ ಚಾಲಕ ಫ್ರಾನ್ಸಿಸ್ ಲೂಯಿಸ್ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ವಂದಿಸಿದರು. ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಗಣೇಶಪುರ ಗಿರೀಶ್ ನಾವಡ ತಂಡದಿಂದ ನಾಟಕ ಪ್ರದರ್ಶನ ನಡೆಯಿತು.