Monday, August 16, 2010

ಜನಮನ ಸೆಳೆದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ

ಮಂಗಳೂರು,ಆಗಸ್ಟ್16:ಜಮ್ಮು ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ದೇಶದ ವೈವಿಧ್ಯತೆಯನ್ನು ಡೊಂಗರಕೇರಿ ಕೆನರಾ ಹೆಮ್ಮಕ್ಕಳ ಪ್ರೌಢಶಾಲೆ 141 ಮಕ್ಕಳು ತಮ್ಮ 30 ನಿಮಿಷದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮನೋಜ್ಞವಾಗಿ ಪ್ರದರ್ಶಿಸಿದರು.
ಜಿಲ್ಲಾ ಮಟ್ಟದ ಸ್ವಾತಂತ್ರ್ಯೋ ತ್ಸವ ದಿನಾಚರಣೆ ಸಂದರ್ಭ ದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಪೊಲೀಸ್ ಇಲಾಖೆಯ ಪೊಲೀಸ್ ಬ್ಯಾಂಡ್ ನೊಂದಿಗೆ ಅಪರಾಹ್ನ 3 ಗಂಟೆಗೆ ನಗರದ ಪುರಭವನದಲ್ಲಿ ಆರಂಭವಾಯಿತು. ನಂತರ ನಡೆದ ಕವಿ ಗೋಷ್ಠಿ ಆಕಾಶ ವಾಣಿಯ ಶಕುಂತಳಾ ಕಿಣಿಯವರ ಅಧ್ಯಕ್ಷತೆಯಲ್ಲಿ ಅರ್ಥ ಪೂರ್ಣವಾಗಿ ನಡೆಯಿತು. ಕವಿ ಗೋಷ್ಠಿಯಲ್ಲಿ ಸ್ವಾತಂತ್ರ್ಯ, ಮಹಿಳಾ ಸ್ವಾತಂತ್ರ್ಯದ ಕುರಿತ ಅರ್ಥಪೂರ್ಣ ಕವಿತೆಗಳು ಮೂಡಿ ಬಂದವು. ವಿದ್ಯಾಂಗ ಉಪ ನಿರ್ದೇಶಕ ಚಾಮೇಗೌಡ, ಬಿಇಒ ದಯಾವತಿ ವೇದಿಕೆಯಲ್ಲಿದ್ದರು. ಕೆನರಾ ಹೆಮ್ಮಕ್ಕಳ ಪ್ರೌಢಶಾಲೆ, ಡೊಂಗರ ಕೇರಿ ಮಕ್ಕಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ಜೋಡಿ ಗೊಂಬೆ ಕಾರ್ಯಕ್ರಮ ಜನಮನ ರಂಜಿಸಿದವು.141 ಮಕ್ಕಳು ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಪುರಭವನ ಜನರಿಂದ ಕಿಕ್ಕಿರಿದಿತ್ತು.