Monday, August 2, 2010

ಪತ್ರಕರ್ತ ಸಿಬಂತಿ ಪದ್ಮನಾಭರಿಗೆ ಆತ್ಮೀಯ ಬೀಳ್ಕೊಡುಗೆ

ಮಂಗಳೂರು,ಆಗಸ್ಟ್ 02:ಕಳೆದ 5 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು,ಇದೀಗ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ ನೇಮಕಗೊಂಡಿರುವ ಮಂಗಳೂರಿನ ಡೆಕ್ಕನ್ ಹೆರಾಲ್ಡ್ ಆಂಗ್ಲ ಪತ್ರಿಕೆಯ ವರದಿಗಾರರಾದ ಸಿಬಂತಿ ಪದ್ಮನಾಭರಿಗೆ ಸೋಮವಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮತ್ತು ಮಂಗಳೂರು ಪ್ರೆಸ್ ಕ್ಲಬ್ ಜಂಟಿಯಾಗಿ ಈ ಕಾರ್ಯ ಕ್ರಮವನ್ನು ಆಯೋಜಿಸಿತ್ತು. ಪತ್ರಕರ್ತರ ಸಂಘದ ಅಧ್ಯಕ್ಷ ಹರ್ಷ ಅಧ್ಯಕ್ಷತೆ ವಹಿಸಿದ್ದರು.ಹಿರಿಯ ಪತ್ರ ಕರ್ತರಾದ ರಘುರಾಮ, ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಗಣೇಶ ಮಾವಂಜಿ, ರೇಷ್ಮಾ ಜಿ ಉಳ್ಳಾಲ,ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗುರುವಪ್ಪ ಎನ್.ಟಿ ಬಾಳೆಪುಣಿ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಪಿ.ಬಿ.ಹರೀಶ್ ರೈ ಸಿಬಂತಿ ಪದ್ಮನಾಭರಿಗೆ ಶುಭ ಹಾರೈಸಿದರು.