Wednesday, September 29, 2010

ಕೋಮು ಸಾಮರಸ್ಯಕ್ಕೆ ನಾಂದಿ ಹಾಡಿ; ಸಚಿವ ಕೃಷ್ಣ ಜೆ.ಪಾಲೇಮಾರ್

ಮಂಗಳೂರು, ಸೆ.29: ನಾಳೆ ಅಯೋದ್ಯೆ ವಿವಾದ ಕುರಿತ ನ್ಯಾಯಾಲಯದ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆ ಯಾವುದೇ ಭಾವೋದ್ವೇಗಕ್ಕೆ ಒಳಗಾಗದೆ ಕೋಮು ಸಾಮರಸ್ಯವನ್ನು ಕಾಪಾಡಿ ಎಲ್ಲರಿಗೂ ಮಾದರಿ ಯಾಗಬೇಕೆಂದು ಮತ್ತು ವದಂತಿಗಳಿಗೆ ಕಿವಿ ಕೊಡಬಾರದೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಜೆ. ಪಾಲೇಮಾರ್ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ. ತೀರ್ಪು ಕಾನೂನು ಪ್ರಕಾರವೇ ಇತ್ಯರ್ಥ ಗೊಳ್ಳಲಿದ್ದು, ಈ ಸಂದರ್ಭದಲ್ಲಿ ಜನತೆ ಗೊಂದಲಕ್ಕೊಳಗಾಗಿ ಕಾನೂನು ಕೈಗೆತ್ತಿ ಕೊಳ್ಳದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.