Wednesday, October 20, 2010

ಅ. 24ರಿಂದ 31ರವರೆಗೆ ರಾಜ್ಯ ಮಟ್ಟದ ಕನ್ನಡ ಪುಸ್ತಕ ಮೇಳ

ಮಂಗಳೂರು, ಅಕ್ಟೋಬರ್.20 : ಸಾಹಿತಿಗಳು, ಲೇಖಕರು, ಪ್ರಕಾಶಕರನ್ನು ಬೆಸೆಯುವ ಹಾಗೂ ಕನ್ನಡ ಪುಸ್ತಕಗಳಲ್ಲಿರುವ ಚಿಂತನೆಗಳನ್ನು ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಕನ್ನಡ ಪುಸ್ತಕ ಪ್ರಾಧಿಕಾರ ಮಂಗಳೂರಿನ ನೆಹರು ಮೈದಾನದಲ್ಲಿ ಅಕ್ಟೋಬರ್ 24 ರಿಂದ 31ರವರೆಗೆ ರಾಜ್ಯ ಮಟ್ಟದ ಕನ್ನಡ ಪುಸ್ತಕ ಮೇಳವನ್ನು ಆಯೋಜಿಸಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಾದ ಅಶೋಕ್ ಎನ್. ಚಲವಾದಿ ಹೇಳಿದರು.
ಈ ಸಂಬಂಧ ಜಿಲ್ಲಾಧಿ ಕಾರಿಗಳ ಸಭಾಂಗ ಣದಲ್ಲಿ ಆಯೋಜಿ ಸಿದ್ದ ಪತ್ರಿಕಾ ಗೋಷ್ಠಿಯ ನ್ನುದ್ದೇಶಿಸಿ ಮಾತನಾಡಿದ ಅವರು, ಅ.24 ಭಾನುವಾರ ಬೆಳಗ್ಗೆ 10 ಗಂಟೆ ಯಿಂದ ಅ.31 ರಂದು ರಾತ್ರಿ 9 ಗಂಟೆಯ ವರೆಗೆ ಪುಸ್ತಕ ಮಾರಾಟ ಹಾಗೂ ಮಕ್ಕಳಲ್ಲಿ ಪುಸ್ತಕ ಪ್ರೀತಿ ಬೆಳೆಸುವ ಉದ್ದೇಶ ದಿಂದ ಕನ್ನಡ ಪುಸ್ತಕ ಮೇಳವನ್ನು ಹಮ್ಮಿ ಕೊಂಡಿದೆ ಎಂದು ವಿವರಿ ಸಿದರು.25,000 ಚದರ ಅಡಿ ವಿಸ್ತೀರ್ಣದ ಅತ್ಯಾಧುನಿಕ ಸೌಲಭ್ಯ ಸಹಿತ ಹಾಗೂ ಧೂಳು ರಹಿತ ಪೆಂಡಾಲ್, ಸುಸಜ್ಜಿತ ಬುಕ್ ಸ್ಟಾಲ್ ಗಳು, 110 ಕ್ಕೂ ಮಿಕ್ಕಿದ ಸಂಖ್ಯೆಯ ಪುಸ್ತಕ ಮಳಿಗೆಗಳೂ, ಪ್ರಸಿದ್ಧ ಪ್ರಕಾಶನ ಸಂಸ್ಥೆಗಳ ಪುಸ್ತಕಗಳು, ರಾಜ್ಯದ ವಿಶ್ವ ವಿದ್ಯಾನಿಲಯಗಳ ಪ್ರಸಾ ರಾಂಗದ ಮಹತ್ವ ಪೂರ್ಣ ಪ್ರಕಟಣೆ ಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಿತ ಕೃತಿಗಳು, ಕನ್ನಡ, ತುಳು, ಕೊಂಕಣಿ, ಬ್ಯಾರಿ,ಕೊಡವ ಇತ್ಯಾದಿ ಅಕಾಡೆಮಿ ಗಳಿಂದ ಪ್ರಕಾಶ ನಗೊಂಡ ಪುಸ್ತಕಗಳು, ಶೇ. 30 ರಿಯಾಯಿತಿ ದರದಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳು. ಶೇ. 10 ರಿಂದ ಮೇಲ್ಪಟ್ಟು ವಿಶೇಷ ರಿಯಾಯಿತಿ ದರದಲ್ಲಿ ಲಭ್ಯವಿದೆ ಎಂದು ಅವರು ನುಡಿದರು. ಮೇಳದ ಜೊತೆಗೆ ಸಾಂಸ್ಕೃತಿಕ ಮತ್ತು ಸಂವಾದ ಕಾರ್ಯಕ್ರಮಗಳು ನಡೆಯಲಿದೆ ಎಂಬುದನ್ನು ಅವರು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಸದಸ್ಯ ಸಂಚಾ ಲಕರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅವರು, ಪ್ರಾಧಿಕಾರದ ಆಶಯ ಗಳನ್ನು ವಿವರಿಸಿ ದರಲ್ಲದೆ,ಜಿಲ್ಲಾ ಕಸಾಪದ ವತಿಯಿಂದ ಲೇಖಕರಿಗೆ ನೇರ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ. ಪ್ರಕಾಶಕರು, ಓದುಗರು,ಲೇಖಕರು, ಎಲ್ಲ ಸಾರ್ವಜನಿಕರು ಈ ಮೇಳದಲ್ಲಿ ಭಾಗವಹಿಸಿ ಪುಸ್ತಕ ಮೇಳವನ್ನು ಯಶಸ್ವಿಗೊಳಿಸಲು ಸಹಕಾರ ಕೋರಿದರು. ಕಳೆದ ಫೆಬ್ರವರಿಯಲ್ಲಿ ಮೈಸೂರು ನಗರದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಪುಸ್ತಕ ಮೇಳ ಅಭೂತ ಪೂರ್ವ ಯಶಸ್ಸು ಕಂಡಿದ್ದು, ಎಲ್ಲ ಪುಸ್ತಕ ಪ್ರೇಮಿಗಳು ಸಹಕರಿಸಲು ಮನವಿ ಮಾಡಿದರು. ಮತ್ತೊಬ್ಬ ಸದಸ್ಯರಾದ ಮುಕುಂದ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಪುಸ್ತಕ ಮೇಳ ಯಶಸ್ಸಿಗೆ ಸಿಇಒ ಅಧ್ಯಕ್ಷತೆಯಲ್ಲಿ ಸಭೆ:ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿರುವ ಪುಸ್ತಕ ಮೇಳವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿ ಕೊಳ್ಳುವ ನಿಟ್ಟಿನಲ್ಲಿ ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪಿ. ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 20 ರಂದು ಬೆಳಗ್ಗೆ ಅಧಿಕಾರಿಗಳ ಸಭೆ ನಡೆಯಿತು.ಜಿಲ್ಲೆಯ ವಿವಿಧ ಪ್ರಾಥಮಿಕ ಮತ್ತು ಪ್ರೌಢ ಶಾಲೆಗ ಳನ್ನೊಳ ಗೊಂಡಂತೆ ಎಲ್ಲ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಪುಸ್ತಕ ಮೇಳದಲ್ಲಿ ಪಾಲ್ಗೊಳ್ಳಲು ಅನುಕೂ ಲವಾಗು ವಂತೆ ಸಂಬಂಧಪಟ್ಟ ಶಾಲೆಗಳಿಗೆ ಸುತ್ತೋಲೆ ಹೊರಡಿಸಲು ವಿದ್ಯಾಂಗ ಇಲಾಖೆ ಉಪ ನಿರ್ದೇಶಕರಾದ ಚಾಮೇ ಗೌಡ ಅವರಿಗೆ ಸಿ ಇ ಒ ಅವರು ಸೂಚಿಸಿದರು. ಪೂರ್ವಹ್ನ ಪ್ರಾಥಮಿಕ ಶಾಲಾ ಮಕ್ಕಳು ಹಾಗೂ ಅಪರಾಹ್ನ ಪ್ರೌಢಶಾಲಾ ಮಕ್ಕಳು ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲು ನಿರ್ಧರಿಸಲಾಯಿತು. ಓದಿನ ಅಭಿರುಚಿಯನ್ನು ಬೆಳೆಸಲು ಪುಸ್ತಕ ಮಳಿಗೆ ಭೇಟಿ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಕಾಲೇಜು ಶಿಕ್ಷಣಾಧಿಕಾರಿಗಳು, ಕಾರ್ಪೋರೇಷನ್ ಅಧಿಕಾರಿಗಳು ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಅಶೋಕ್ ಎನ್. ಚಲವಾದಿ ಸದಸ್ಯರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಪುಸ್ತಕ ಮೇಳ ಸುವ್ಯವಸ್ಥಿತವಾಗಿ ನಡೆಸಲು ಅನುಕೂಲವಾಗುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಸಿ ಇ ಒ ಅವರು ಹೇಳಿದರು.