
ಅವರು ಶುಕ್ರವಾರ ನಗರದ ಲೋಕೋ ಪಯೋಗಿ ಇಲಾಖೆಯ ವೃತ್ತ ಕಚೇರಿಗೆ ಭೇಟಿ ನೀಡಿ ಕಾರ್ಯಾಲಯದ ನವೀಕರಣ ಕಾಮಗಾರಿ ವೀಕ್ಷಿಸಿದ ಬಳಿಕ ಸಚಿವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಬಂದರು ಇಲಾಖೆಯ ರೂ. 15 ಕೋಟಿಯ ಕಾಮಗಾರಿ ಪ್ರಗತಿಯಲ್ಲಿದೆ. ರೂ. 358 ಕೋಟಿಯ ಕಾಮಗಾರಿ ಸದ್ಯದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು. ಮೀನುಗಾರಿಕಾ ಇಲಾಖೆಯ ರೂ. ಒಂದು ಕೋಟಿ ಮೌಲ್ಯದ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದೆ. ರೂ. 3.2 ಕೋಟಿ ಮೌಲ್ಯದ ಕಾಮಗಾರಿಗಳನ್ನು ಶೀಘ್ರ ಆರಂಭಿಸಲಾಗುವುದು ಎಂದು ಸಚಿವರು ವಿವರಿಸಿದರು.
ಪಿಲಿಕುಳ ನಿಸರ್ಗಧಾಮದಲ್ಲಿ ತಾರಾಲಯ ನಿರ್ಮಾಣಕ್ಕಾಗಿ ಸರಕಾರ ರೂ. 15.5 ಕೋಟಿ ಮಂಜೂರು ಮಾಡಿದೆ. ಯೋಜನೆಯನ್ನು ಶೀಘ್ರ ಆರಂಭಿಸಲಾಗುವುದು ಎಂದು ಸಚಿವರು ನುಡಿದರು.
ಲೋಕೋಪಯೋಗಿ ಇಲಾಖೆ ಮತ್ತು ಇತರ ಕಚೇರಿ ಸಮುಚ್ಛಯಗಳ ಪೈಕಿ ಲೋಕೋಪಯೋಗಿ ಇಲಾಖೆಯ ಕಾರ್ಯಾಲಯವನ್ನು ನವೀಕರಿಸಲಾಗಿದೆ. ಉಳಿದ ಇಲಾಖೆಗಳ ನವೀಕರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಬಿ.ಎಸ್.ಬಾಲಕೃಷ್ಣ ಮತ್ತು ಕಾರ್ಯನಿರ್ವಾಹಕ ಅಭಿಯಂತರ ಗೋಪಾಲ್ ಗೌಡ ಉಪಸ್ಥಿತರಿದ್ದರು.