Thursday, November 18, 2010

ಜಿಪಿಎಸ್ ಅಳವಡಿಕೆ ಉದ್ದೇಶ ಸಾರ್ಥಕಪಡಿಸಿ ; ಜಿಲ್ಲಾಧಿಕಾರಿ ಸುಭೋದ್ ಯಾದವ್

ಮಂಗಳೂರು,ನವೆಂಬರ್ 18: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣಿಕೆ ತಡೆಯಲು ಕಂಡುಕೊಂಡ ಜಿಪಿಎಸ್ ವ್ಯವಸ್ಥೆಯ ಉದ್ದೇಶವನ್ನು ಸಾರ್ಥಕ ಪಡಿಸಲು ಗಣಿ ಮತ್ತು ಭೂ ವಿಜ್ನಾನ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸುಭೋದ್ ಯಾದವ್ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಇಂದು ತಮ್ಮ ಕಚೇರಿಯಲ್ಲಿ ಕರೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತ ನಾಡಿದರು. ಜಿಲ್ಲೆಯಿಂದ ನೆರೆಯ ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಣಿಕೆ ತಡೆಯಲು ತೆಗೆದುಕೊಂಡ ಪರಿಣಾಮಕಾರಿ ಕ್ರಮಗಳಲ್ಲಿ ಒಂದಾದ ಮರಳು ಲಾರಿಗಳಿಗೆ ಜಿಪಿಎಸ್ ಸಾಧನ ಅಳವಡಿಕೆ ಅಧಿಕಾರಿಗಳ ನಿರ್ಲಕ್ಷ ದಿಂದ ವ್ಯರ್ಥ ವಾಗಬಾರದು ಎಂಬುವುದನ್ನು ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿಗಳು ಈ ನಿಟ್ಟಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಬಳಿ ಸಮಗ್ರ ಮಾಹಿತಿ ನೀಡುವಂತೆ ಸೂಚನೆ ನೀಡಿದರು. ಇದಕ್ಕೆ ಉತ್ತರಿಸಿದ ಗಣಿ ಮತ್ತು ಭೂ ವಿಜ್ನಾನ ಇಲಾಖೆಯ ಅಧಿಕಾರಿಗಳು ಜಿಪಿಎಸ್ ಅಳವಡಿಸಿದ ಐ ಸರ್ಚ ಕಂಪೆನಿಯ ಬಳಿ ಈ ಬಗ್ಗೆ ನಿಕಟ ಸಂಪರ್ಕವನ್ನಿರಿಸಿಕೊಂಡು ಮಾಹಿತಿ ನೀಡುತ್ತಿದ್ದು, ತಾಂತ್ರಿಕ ಕಾರಣಗಳಿಂದ ಮಾನಿಟರಿಂಗ್ ವ್ಯವಸ್ಥೆಯಲ್ಲಿ ಕುಂದು ಉಂಟಾಗಿದೆ ಎಂಬುದನ್ನು ಒಪ್ಪಿಕೊಂಡರು. ಗಡಿ ಪ್ರದೇಶ ನರಿಂಗಾಣ ಗ್ರಾಮ ಪಂಚಾ ಯತ್ ವ್ಯಾಪ್ತಿಯ ಜನರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳ ಲಾಗಿದ್ದು, ಅಲ್ಲಿನ ಗ್ರಾಮಸ್ಥರಿಗೆ ಅಕ್ರಮ ಮರಳಿನ ಲಾರಿಗಳು ಸಂಚರಿ ಸುವುದು ಗಮನಕ್ಕೆ ಬಂದರೆ ಮಾಹಿತಿ ನೀಡಲು ಅನುಕೂ ಲವಾಗು ವಂತೆ ತಮ್ಮ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ.ಉಳಿದ ಗಡಿ ಭಾಗಗಳ ಗ್ರಾಮ ಪಂಚಾಯತ್ ಗಳೊಂದಿಗೂ ಇದೇ ರೀತಿಯ ಸಂಬಂಧವಿರಿಸಿ ಮಾಹಿತಿ ಪಡೆಯಲು ಕ್ರಮ ಕೈ ಗೊಳ್ಳಲಾಗಿದೆ ಎಂದು ಉತ್ತರಿಸಿದರು.
ಈ ಜಿಪಿಎಸ್ ಸಾಧನ ಅಳವಡಿಕೆಯ ಉದ್ದೇಶ ಸಾರ್ಥಕವಾಗಬೇಕೆಂದು ಈ ಬಗ್ಗೆ ಇಲಾಖೆ ಗಂಭೀರ ನಡಾವಳಿಗಳನ್ನು ತೆಗೆದುಕೊಳ್ಳ ಬೇಕೆಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಡಳಿತ ಅಕ್ರಮ ತಡೆಗೆ ಮಾನವ ಸಂಪನ್ಮೂಲ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಶ್ರಮವನ್ನು ಬಳಸಿಕೊಂಡಿದ್ದು, ಯಾವುದೇ ಕಾರಣಕ್ಕೂ ಅಕ್ರಮ ಮರಳು ಸಾಗಾಣಿಕೆ ದೂರು ಬಂದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.