Friday, December 31, 2010

ಸಂಚಾರಿ ಜನತಾ ನ್ಯಾಯಾಲಯ

ಮಂಗಳೂರು,ಡಿಸೆಂಬರ್ 31:ದಕ್ಷಿಣಕನ್ನಡ ಜಿಲ್ಲಾಡಳಿತ,ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್,ವಕೀಲರ ಸಂಘ,ಜಿಲ್ಲಾ ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಕಾರ್ಮಿಕ ಇಲಾಖೆ,ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ,ಜನಶಿಕ್ಷಣ ಟ್ರಸ್ಟ್,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ,ಮೆಗಾ ಲೋಕ ಅದಾಲತ್ ,ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಾಕ್ಷರತಾ ರಥ ಸಂಚಾರಿ ಜನತಾ ನ್ಯಾಯಾಲಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ ದ್ಯೇಯೋದ್ದೇಶಗಳಾದ ಕಾನೂನು ಸಾಕ್ಷರತಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ' ನಾಮಾಂಕಿತ ವಾಹನವು ದಿನಾಂಕ 1-1-2011 ರಿಂದ 15-1-2011 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಚರಿಸಲಿದೆ.ಜನಸಾಮಾನ್ಯರು ,ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದು ಕೊಳ್ಳಬಹುದಾಗಿದೆ ಎಂದು ಮಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿರುತ್ತಾರೆ.
ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ ನಾಮಾಂಕಿತ ವಾಹನವು ದಿನಾಂಕ 1-1-2011 ರಿಂದ 3-1-2011 ರ ವರೆಗೆ ಸುಳ್ಯ ತಾಲೂಕಿನಲ್ಲಿ, 4-1-11 ರಿಂದ 6-1-11 ರ ವರೆಗೆ ಪುತ್ತೂರು ತಾಲೂಕಿನಲ್ಲಿ, 7-1-11 ರಿಂದ 9-1-11 ರ ವರೆಗೆ ಬಂಟ್ವಾಳ ತಾಲೂಕಿನಲ್ಲಿ,10-1-11 ರಿಂದ 12-1-11ರ ವರೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಹಾಗೂ 13-1-11 ರಿಂದ 15-1-11 ರ ವರೆಗೆ ಮಂಗಳೂರು ತಾಲೂಕಿನಲ್ಲಿ ಸಂಚರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಸಾಕ್ಷರತಾ ರಥ ತಾಲೂಕುಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ,ಪರಿಹಾರವನ್ನು ಪಡೆದುಕೊಳ್ಳಬಹುದಾಗಿದೆ.