Tuesday, January 25, 2011

ಸುಸ್ಥಿರ ಅಭಿವೃದ್ಧಿಯೇ ಸರ್ಕಾರದ ಆದ್ಯತೆ: ಸಚಿವ ಪಾಲೆಮಾರ್

ಮಂಗಳೂರು,ಜನವರಿ.25:ಸುಸ್ಥಿರ ಅಭಿವೃದ್ಧಿಯೇ ಸರ್ಕಾರದ ಮೂಲ ಮಂತ್ರವಾಗಿದ್ದು, ಇತ್ತೀಚಿನ ಚುನಾವಣಾ ವಿಜಯಗಳು ಜನಪರ ಆಡಳಿತಕ್ಕೆ ಸಾಕ್ಷಿಯಾ ಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾದ ಕೃಷ್ಣ ಜೆ. ಪಾಲೆಮಾರ್ ಅವರು ಹೇಳಿದರು.
ಅವರಿಂದು ಕರಾವಳಿ ಉತ್ಸವ ಮೈದಾನ ದಲ್ಲಿ ವಾರ್ತಾ ಇಲಾಖೆ ಪ್ರಗತಿ ದರ್ಶನ ವಸ್ತು ಪ್ರದರ್ಶನ ವನ್ನು ಉದ್ಘಾ ಟಿಸಿ ಮಾತ ನಾಡುತ್ತಿ ದ್ದರು. ಜನತೆಯ ಆಶೀರ್ವಾದ ಸದಾ ತಮ್ಮ ಮೇಲಿದ್ದು, ನಿರಂತರ ಅಭಿವೃದ್ಧಿಯೇ ನಮ್ಮ ಸರ್ಕಾರದ ಮೂಲಮಂತ್ರ ಎಂದು ಅವರು ಪುನರುಚ್ಛರಿಸಿದರು. ಎಲ್ಲ ವಲಯಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಅನುದಾನ ಮೀಸಲಿರಿಸಿದ್ದು, ಸಮಗ್ರ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದರು. ಕರಾವಳಿ ಉತ್ಸವದ ಜೊತೆಗೆ ರಾಣಿ ಅಬ್ಬಕ್ಕ ಉತ್ಸವಕ್ಕೆ 25 ಲಕ್ಷ ರೂ. ನೀಡಲಾಗಿದೆ. ಪಿಲಿಕುಳದ ಕಂಬಳಕ್ಕೆ 5 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಸ್ಥಳೀಯ ಪರಂಪರೆ ಸಂರಕ್ಷಣೆಗೂ ಸರ್ಕಾರ ಬದ್ಧವಾಗಿದೆ ಎಂದರು.